ಮೈಸೂರು : ಚಾಮುಂಡಿಬೆಟ್ಟದ ಸಮೀಪ ಬಸ್ ನಲ್ಲಿ ಬೆಂಕಿ : 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ – Vishwanews24

Featured, ರಾಜ್ಯ ನ್ಯೂಸ್

ಮೈಸೂರು: ಚಾಮುಂಡಿಬೆಟ್ಟದ ಸಮೀಪ ಬಸ್ ನಲ್ಲಿ ಬೆಂಕಿ: 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಚಾಮುಂಡಿಬೆಟ್ಟದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.

ಮಂಗಳೂರು: ಕುಕ್ಕರ್ ಬಾಂಬ್ ಸ್ಟೋಟ ಪ್ರಕರಣ : ಉಡುಪಿ ಮೂಲದ ವಿದ್ಯಾರ್ಥಿ ರಿಶಾನ್ ಸಹಿತ ಇಬ್ಬರು NIA ವಶಕ್ಕೆ – Vishwanews24

ಗುಜರಾತ್ ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ () ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.

ಕಾಪು: ಸಮುದ್ರ ಮಧ್ಯದಲ್ಲಿ ಬಂಡೆಗೆ ಡಿಕ್ಕಿ ಹೊಡೆದ ಬೋಟ್ – ಅಪಾಯದಲ್ಲಿದ್ದ ಐವರು ಮೀನುಗಾರರ ರಕ್ಷಣೆ – Vishwanews24

Leave a Reply