ಮೈಸೂರು:ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.
ಸುಮಾರು 400 ವರ್ಷಗಳ ಹಿಂದೆ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ಇದು ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರಬಿಂದು. ಆದರೆ, ವಿಗ್ರಹದ ಕಾಲು, ಕುತ್ತಿಗೆ, ಮುಖದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಅಂದಹಾಗೆ, ಈ ಬಿರುಕು ಕಾಣಿಸಿಕೊಳ್ಳಲು ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇತ್ತೀಚೆಗೆ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ. ಕೆಲವು ಕಡೆ ಬಿರುಕು ಬಿಟ್ಟಿರುವ ರೀತಿ ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಅದು ಬಿರುಕಲ್ಲ, ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿ ವರದಿ ನೀಡಲಿದ್ದು, ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ಅದನ್ನು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ. 1659ರಲ್ಲಿ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ವಿಗ್ರಹ 25 ಅಡಿ ಉದ್ದ ಇದೆ. ಈ ನಂದಿ ಚಾಮುಂಡಿ ಬೆಟ್ಟದ ಪ್ರಮುಖ ಆಕರ್ಷಣೆಯಾಗಿದೆ.
ನಂದಿಗೆ ಎಣ್ಣೆ ಮತ್ತಿತ್ಯಾದಿ ಅಂಶಗಳು ತಾಗಿ ಕಪ್ಪಾಗಿತ್ತು. ಹೀಗಾಗಿ ರಾಸಾಯನಿಕ ಬಳಕೆ ಮಾಡಿ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ವೇಳೆ ನಂದಿ ವಿಗ್ರಹ ಬಿಳಿ ಬಣ್ಣಕ್ಕೆ ತಿರುಗಿತ್ತು.
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…