ಮೈಸೂರು:ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.
ಸುಮಾರು 400 ವರ್ಷಗಳ ಹಿಂದೆ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ಇದು ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರಬಿಂದು. ಆದರೆ, ವಿಗ್ರಹದ ಕಾಲು, ಕುತ್ತಿಗೆ, ಮುಖದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಅಂದಹಾಗೆ, ಈ ಬಿರುಕು ಕಾಣಿಸಿಕೊಳ್ಳಲು ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇತ್ತೀಚೆಗೆ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ. ಕೆಲವು ಕಡೆ ಬಿರುಕು ಬಿಟ್ಟಿರುವ ರೀತಿ ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಅದು ಬಿರುಕಲ್ಲ, ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿ ವರದಿ ನೀಡಲಿದ್ದು, ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ಅದನ್ನು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ. 1659ರಲ್ಲಿ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ವಿಗ್ರಹ 25 ಅಡಿ ಉದ್ದ ಇದೆ. ಈ ನಂದಿ ಚಾಮುಂಡಿ ಬೆಟ್ಟದ ಪ್ರಮುಖ ಆಕರ್ಷಣೆಯಾಗಿದೆ.
ನಂದಿಗೆ ಎಣ್ಣೆ ಮತ್ತಿತ್ಯಾದಿ ಅಂಶಗಳು ತಾಗಿ ಕಪ್ಪಾಗಿತ್ತು. ಹೀಗಾಗಿ ರಾಸಾಯನಿಕ ಬಳಕೆ ಮಾಡಿ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ವೇಳೆ ನಂದಿ ವಿಗ್ರಹ ಬಿಳಿ ಬಣ್ಣಕ್ಕೆ ತಿರುಗಿತ್ತು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…