ಮೈಸೂರು:ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.
ಸುಮಾರು 400 ವರ್ಷಗಳ ಹಿಂದೆ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ಇದು ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರಬಿಂದು. ಆದರೆ, ವಿಗ್ರಹದ ಕಾಲು, ಕುತ್ತಿಗೆ, ಮುಖದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಅಂದಹಾಗೆ, ಈ ಬಿರುಕು ಕಾಣಿಸಿಕೊಳ್ಳಲು ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇತ್ತೀಚೆಗೆ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ. ಕೆಲವು ಕಡೆ ಬಿರುಕು ಬಿಟ್ಟಿರುವ ರೀತಿ ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಅದು ಬಿರುಕಲ್ಲ, ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿ ವರದಿ ನೀಡಲಿದ್ದು, ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ಅದನ್ನು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ. 1659ರಲ್ಲಿ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ವಿಗ್ರಹ 25 ಅಡಿ ಉದ್ದ ಇದೆ. ಈ ನಂದಿ ಚಾಮುಂಡಿ ಬೆಟ್ಟದ ಪ್ರಮುಖ ಆಕರ್ಷಣೆಯಾಗಿದೆ.
ನಂದಿಗೆ ಎಣ್ಣೆ ಮತ್ತಿತ್ಯಾದಿ ಅಂಶಗಳು ತಾಗಿ ಕಪ್ಪಾಗಿತ್ತು. ಹೀಗಾಗಿ ರಾಸಾಯನಿಕ ಬಳಕೆ ಮಾಡಿ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ವೇಳೆ ನಂದಿ ವಿಗ್ರಹ ಬಿಳಿ ಬಣ್ಣಕ್ಕೆ ತಿರುಗಿತ್ತು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…