ಮೈಸೂರು : ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು -Vishwanews24

ಮೈಸೂರು:ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.

ಸುಮಾರು 400 ವರ್ಷಗಳ ಹಿಂದೆ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ಇದು ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರಬಿಂದು. ಆದರೆ, ವಿಗ್ರಹದ ಕಾಲು, ಕುತ್ತಿಗೆ, ಮುಖದಲ್ಲಿ ಬಿರುಕು ಕಾಣಿಸಿಕೊಂಡಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಅಂದಹಾಗೆ, ಈ ಬಿರುಕು ಕಾಣಿಸಿಕೊಳ್ಳಲು ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇತ್ತೀಚೆಗೆ ನಂದಿ ವಿಗ್ರಹವನ್ನು ಪಾಲಿಷ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ. ಕೆಲವು ಕಡೆ ಬಿರುಕು ಬಿಟ್ಟಿರುವ ರೀತಿ ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಅದು ಬಿರುಕಲ್ಲ, ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿ ವರದಿ ನೀಡಲಿದ್ದು, ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ಅದನ್ನು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ. 1659ರಲ್ಲಿ ನಂದಿ ವಿಗ್ರಹ ನಿರ್ಮಾಣ ಮಾಡಲಾಗಿತ್ತು. ವಿಗ್ರಹ 25 ಅಡಿ ಉದ್ದ ಇದೆ. ಈ ನಂದಿ ಚಾಮುಂಡಿ ಬೆಟ್ಟದ ಪ್ರಮುಖ ಆಕರ್ಷಣೆಯಾಗಿದೆ.

ನಂದಿಗೆ ಎಣ್ಣೆ ಮತ್ತಿತ್ಯಾದಿ ಅಂಶಗಳು ತಾಗಿ ಕಪ್ಪಾಗಿತ್ತು. ಹೀಗಾಗಿ ರಾಸಾಯನಿಕ ಬಳಕೆ ಮಾಡಿ ನಂದಿ ವಿಗ್ರಹವನ್ನು ಪಾಲಿಷ್​ ಮಾಡಲಾಗಿತ್ತು. ಈ ವೇಳೆ ನಂದಿ ವಿಗ್ರಹ ಬಿಳಿ ಬಣ್ಣಕ್ಕೆ ತಿರುಗಿತ್ತು.

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

51 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

55 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

1 hour ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago