ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರನ್ನ ಒಂದೇ ತಿಂಗಳಲ್ಲಿ ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶರತ್ ಒಂದು ತಿಂಗಳ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ಕಳೆದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಪ್ಲಾನ್ ಮಾಡಿಕೊಂಡಿರಲಿಲ್ಲ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಆಗಿದೆ. ಇದುವರೆಗೂ ಜಿಲ್ಲಾಧಿಕಾರಿ ದಸರಾ ಆಚರಣೆ ಯೋಜನೆಯನ್ನ ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆ ಶರತ್ ಅವರ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…