ಮೈಸೂರು: ‘ಜಿಲ್ಲೆಯಲ್ಲಿನ ಭೂ ಮಾಫಿಯಾ ವಿಚಾರವಾಗಿ ಜಿಲ್ಲಾಧಿಕಾರಿ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ತನಿಖೆಗೆ ನಾವು ಯಾವುದೇ ರೀತಿಯಲ್ಲಿ ಅಡ್ಡಿಪಡಿಸುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಇಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಾದೇಶಿಕ ಆಯುಕ್ತರಿಗೂ ಕೆಲವರು ದೂರು ನೀಡಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ, ಹಿಂದಿನ ಜಿಲ್ಲಾಧಿಕಾರಿ ಕೈಗೆತ್ತಿಗೊಂಡಿರುವ ತನಿಖೆಗಳನ್ನು ಈಗಿನ ಜಿಲ್ಲಾಧಿಕಾರಿ ಮುಂದುವರಿಸಲಿದ್ದಾರೆ’ ಎಂದರು.
ರೋಹಿಣಿ ಸಿಂಧೂರಿ ಅವರನ್ನೇ ತನಿಖಾಧಿಕಾರಿಯಾಗಿ ನೇಮಿಸಿಬೇಕೆಂದು ಎಚ್.ವಿಶ್ವನಾಥ್ ನೀಡಿರುವ ಸಲಹೆ ಕುರಿತು, ‘ಸಿಂಧೂರಿ ಅವರನ್ನೇ ನೇಮಿಸಲಿ, ಅದು ಸಂತೋಷದ ವಿಚಾರ. ವಿಶ್ವನಾಥ್ ಹಿರಿಯ ನಾಯಕ. ಅವರ ಸಲಹೆ ಸ್ವೀಕಾರವಾಗುವಂಥದ್ದು’ ಎಂದು ಹೇಳಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…