ಮೈಸೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಕೇವಲ ಎರಡು ದಿನ ಉಳಿದಿದ್ದು, ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ನಿರಂತರವಾಗಿ ಒತ್ತಡ ಹೇರುತ್ತಿದ್ದರೂ, ಅದನ್ನು ಮೆಟ್ಟಿ ನಿಂತು ಬಿಜೆಪಿಯೊಂದಿಗೆ ಸಾಗಲು ಜೆಡಿಎಸ್ ನಿರ್ಧರಿಸಿದೆ.
ಮೊದಲ ಅವಧಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ಗೆ ಆಘಾತ ನೀಡಿತ್ತು. ಇದೀಗ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನೂತನ ಸಾರಥಿಗಳ ಆಯ್ಕೆಗೆ ಫೆ. 23ರಂದು ಚುನಾವಣೆ ನಿಗದಿಯಾಗಿದೆ. ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬಾರದು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ರಾಜ್ಯ ಸರಕಾರದ ಮೈತ್ರಿ ಪಕ್ಷ ಜೆಡಿಎಸ್ನ ಮೇಲೆ ಕಾಂಗ್ರೆಸ್ ನಿರಂತರ ಒತ್ತಡ ತಂದಿದೆ. ಒಂದು ಹಂತದಲ್ಲಿ ಜಿ.ಪಂ.ನಲ್ಲಿ ಮೈತ್ರಿ ಬದಲಾಗಿ ಕಾಂಗ್ರೆಸ್ನೊಂದಿಗೆ ಅಧಿಕಾರ ಹಂಚಿಕೊಳ್ಳುವ ಲಕ್ಷಣಗಳು ಕಂಡು ಬಂದರೂ ಇದೀಗ ಕಾಂಗ್ರೆಸ್ಗಿಂತ ಬಿಜೆಪಿಯೇ ಲೇಸು ಎಂಬ ತೀರ್ಮಾನಕ್ಕೆ ತೆನೆ ಪಾಳಯದ ಮುಖಂಡರು ಬಂದಿದ್ದಾರೆ.
ಕೇವಲ ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿ ‘ಮಹಾಘಟ್ ಬಂಧನ್’ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಯೂ ಜೆಡಿಎಸ್-ಕಾಂಗ್ರೆಸ್ ಅಕ್ಕಪಕ್ಕ ನಿಂತುಕೊಂಡಿವೆ. ಇಂತಹದರಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ತಮ್ಮ ಸಾಂಪ್ರದಾಯಿಕ ಎದುರಾಳಿ ಬಿಜೆಪಿಯೊಂದಿಗೆ ಕೈಜೋಡಿಸಿದರೆ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರು ಜೆಡಿಎಸ್ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದಾರೆ. ಜೆಡಿಎಸ್ನ ವರ್ತನೆಯ ವಿರುದ್ಧ ಸಂಸದ ಧ್ರುವನಾರಾಯಣ್, ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಡಾ. ಪುಷ್ಪಾ ಅಮರ್ನಾಥ್ ಅವರು ಸಿದ್ದರಾಮಯ್ಯರೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಳೇ ದೋಸ್ತಿಯನ್ನೇ ಮುಂದುವರೆಸಲಾಗುವುದು ಎಂದು ಜೆಡಿಎಸ್ ಕೂಡ ಈಗಾಗಲೇ ಸ್ಪಷ್ಟನೆ ಕೊಟ್ಟಿದೆ. ನಾವು ಈಗಾಗಲೇ ಬಿಜೆಪಿ ಜೊತೆ 30 ತಿಂಗಳ ಅಧಿಕಾರ ನಡೆಸಿದ್ದೇವೆ. ಅವರ ಜೊತೆಯಲ್ಲೇ ಮುಂದುವರೆಯುತ್ತೇವೆ ಎಂಬ ಮಾತು ಕೂಡ ಕೊಟ್ಟಿದ್ದೇವೆ. ಹೀಗಾಗಿ ಬಿಜೆಪಿಗೆ ನಾವು ಮೋಸ ಮಾಡುವುದಿಲ್ಲ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…