ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದ ದೃಷ್ಟಿಯಿಂದ ಜೂ. 14 ರಿಂದ 21ರ ವರೆಗೆ ಲಾಕ್ಡೌನ್ ಮುಂದುವರಿಕೆ ಮಾಡಲಾಗುವುದು ಎಂದು ಮೈಸೂರಿನಲ್ಲಿ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜೂನ್ 14ರ ನಂತರವೂ ಮೈಸೂರಿನಲ್ಲಿ ಲಾಕ್ಡೌನ್ ಮುಂದುವರಿಯಲಿದೆ. ಆದರೆ ಯಾವುದಕ್ಕೆ ವಿನಾಯಿತಿ ಕೊಡಬೇಕು ಎಂಬುದರ ಕುರಿತು ಚರ್ಚಿಸಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದ್ದಾರೆ.
ಅನ್ ಲಾಕ್ ಮಾಡಬೇಕಿದ್ರೆ ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕು ಅನ್ನುವ ನಿಯಮ ಇದೆ. ಮೈಸೂರಿನಲ್ಲಿ ಈಗ ಶೇ.13 ರಷ್ಟು ಪಾಸಿಟಿವಿಟಿ ರೇಟ್ ಇದೆ. ಇದನ್ನು ಅತೀ ಶೀಘ್ರದಲ್ಲಿ ಶೇ.5 ಕ್ಕಿಳಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗ ಬೇಕಿದೆ.
ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿ.ಪಂ ಸಿಇಓ ಹಾಗೂ ಎಸ್ಪಿ ಒಂದೇ ಕಾರಿನಲ್ಲಿ ಕ್ಷೇತ್ರ ಸಂಚಾರ ಮಾಡಲಿದ್ದಾರೆ.
ಮೈಸೂರಿನ ಎಲ್ಲಾ 11ಕ್ಷೇತ್ರಗಳಿಗೂ ಒಟ್ಟಿಗೆ ಭೇಟಿಕೊಟ್ಟು ಕೋವಿಡ್ ಪರಿಸ್ಥಿತಿ ತಹಬದಿಗೆ ತರಲಿದ್ದಾರೆ ಎಂದು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…