ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಮೃತರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಹಾಗೂ ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ. ಕೊಲೆಗಾರ ಸಾಗರ್ ತಲೆಮರೆಸಿಕೊಂಡಿದ್ದಾನೆ.
ಕಳೆದ ಹಲವು ದಿನಗಳಿಂದ ಶಿವಪ್ರಕಾಶ್ ಲತಾ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಇದಕ್ಕೆ ಪುತ್ರನಿಂದ ಆಕ್ಷೇಪವೂ ವ್ಯಕ್ತವಾಗಿತ್ತು. ಈ ಸಂಬಂಧ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ನಡುವೆ ಲತಾ ಮನೆಗೆ ನುಗ್ಗಿದ್ದ ಸಾಗರ್ ಮೊದಲು ತಂದೆಯನ್ನು ಕೊಲೆ ಮಾಡಿ ಬಳಿಕ ಲತಾಳನ್ನು ಮಚ್ಚಿನೇಟಿನಿಂದ ಸಾಯಿಸಿದ್ದಾನೆ.
ಈ ನಡುವೆ ಲತಾ ಮೇಲೆ ಹಲ್ಲೆಗೆ ಮುಂದಾದ ವೇಳೆ ಲತಾ ಪುತ್ರ ನಾಗಾರ್ಜುನ ಅಡ್ಡ ಬಂದಿದ್ದು ಅವನಿಗೂ ಮಚ್ಚಿನಿಂದ ಹಲ್ಲೆ ಮಾಡಿರುವ ಸಾಗರ್ ಪರಾರಿಯಾಗಿದ್ದಾನೆ. ಗಾಯಗೊಂಡಿರುವ ನಾಗಾರ್ಜುನನನ್ನು ಆಸ್ಪತ್ರೆ ದಾಖಲಿಸಲಾಗಿದ್ದು, ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಸಾಗರ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…