ಮೈಸೂರು: ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಮೃತರನ್ನು ಕೆ.ಜಿ ಕೊಪ್ಪಲು ನಿವಾಸಿ ಶಿವಪ್ರಕಾಶ್ (56) ಹಾಗೂ ಶ್ರೀನಗರದ ನಿವಾಸಿ ಲತಾ (48) ಎಂದು ಗುರುತಿಸಲಾಗಿದೆ. ಕೊಲೆಗಾರ ಸಾಗರ್ ತಲೆಮರೆಸಿಕೊಂಡಿದ್ದಾನೆ.
ಕಳೆದ ಹಲವು ದಿನಗಳಿಂದ ಶಿವಪ್ರಕಾಶ್ ಲತಾ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಇದಕ್ಕೆ ಪುತ್ರನಿಂದ ಆಕ್ಷೇಪವೂ ವ್ಯಕ್ತವಾಗಿತ್ತು. ಈ ಸಂಬಂಧ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ನಡುವೆ ಲತಾ ಮನೆಗೆ ನುಗ್ಗಿದ್ದ ಸಾಗರ್ ಮೊದಲು ತಂದೆಯನ್ನು ಕೊಲೆ ಮಾಡಿ ಬಳಿಕ ಲತಾಳನ್ನು ಮಚ್ಚಿನೇಟಿನಿಂದ ಸಾಯಿಸಿದ್ದಾನೆ.
ಈ ನಡುವೆ ಲತಾ ಮೇಲೆ ಹಲ್ಲೆಗೆ ಮುಂದಾದ ವೇಳೆ ಲತಾ ಪುತ್ರ ನಾಗಾರ್ಜುನ ಅಡ್ಡ ಬಂದಿದ್ದು ಅವನಿಗೂ ಮಚ್ಚಿನಿಂದ ಹಲ್ಲೆ ಮಾಡಿರುವ ಸಾಗರ್ ಪರಾರಿಯಾಗಿದ್ದಾನೆ. ಗಾಯಗೊಂಡಿರುವ ನಾಗಾರ್ಜುನನನ್ನು ಆಸ್ಪತ್ರೆ ದಾಖಲಿಸಲಾಗಿದ್ದು, ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆ ಮರೆಸಿಕೊಂಡಿರುವ ಸಾಗರ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…