ರಾಜ್ಯ ನ್ಯೂಸ್

ಮೈಸೂರು: ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ – vishwanews24

ಮೈಸೂರು:  ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ

ಮೈಸೂರು: ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ  ಆನೆ ಅಭಿಮನ್ಯುವಿನ  ಮಾವುತ ಜೆ.ಎಸ್​ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.

ಜೆ.ಎಸ್​. ವಸಂತ್​ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ. ಕ್ಯಾಪ್ಟನ್ ಅಭಿಮನ್ಯು ಸತತ ನಾಲ್ಕು ಬಾರಿ ಅಂಬಾರಿ ಹೊತ್ತಿದ್ದು, ಐದನೇ ಬಾರಿಗೆ ಅಂಬಾರಿ ಹೊರಲು ಸಿದ್ದನಾಗಿದ್ದಾನೆ.

ದಸರಾ ಮಹೋತ್ಸವದ ಚಿನ್ನದ ಅಂಬಾರಿಯನ್ನು ಹೊರುವ ಕ್ಯಾಪ್ಟನ್​ ಅಭಿಮನ್ಯುವಿನ ಮಾವುತ ಜೆ.ಎಸ್​ ವಂಸತ ಅವರು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ. ಜೆ.ಎಸ್​ ವಂಸತ ಅವರು 100ಕ್ಕೂ ಹೆಚ್ಚು ಕಾಡಾನೆ ಹಾಗೂ ಹುಲಿ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. 2017ರಲ್ಲಿ ಇಂಡೋನೇಷ್ಯಾ ದೇಶಕ್ಕೆ ಹೋಗಿ ಅಲ್ಲಿಯ ಆನೆಗಳಿಗೆ ಕೂಡ ತರಬೇತಿಯನ್ನು ಪಡೆಯಲು ಹಾಗೂ ರಾಜ್ಯದಲ್ಲಿ ಹಾಗೂ ಶಿಬಿರಗಳಲ್ಲಿ ನೀಡುವ ತರಬೇತಿಯನ್ನು ನೀಡಿದ್ದಾರೆ.

2020 ಮತ್ತು 21ನೇ ಸಾಲಿನಲ್ಲಿ ಎರಡು ವರ್ಷಗಳ ಕಾಲ ಮೈಸೂರು ದಸರಾ ನಾಡಹಬ್ಬದಲ್ಲಿ ಅಂಬಾರಿಯನ್ನು ಹೊರಿಸುವ ಮೂಲಕ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮಾನವ-ವನ್ಯಪ್ರಾಣಿ ಸಂಘರ್ಷದ ನಿಯಂತ್ರಣದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜೆ.ಎಸ್​ ವಸಂತ ಅವರ ಈ ಎಲ್ಲ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago