ಮೈಸೂರು: ಅರಣ್ಯ ಇಲಾಖೆಯಲ್ಲಿ ಗಣನೀಯ ಸೇವೆಯನ್ನು ಗುರುತಿಸಿ ದಸರಾ ಆನೆ ಅಭಿಮನ್ಯುವಿನ ಮಾವುತ ಜೆ.ಎಸ್ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.
ಜೆ.ಎಸ್. ವಸಂತ್ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದಾರೆ. ಕ್ಯಾಪ್ಟನ್ ಅಭಿಮನ್ಯು ಸತತ ನಾಲ್ಕು ಬಾರಿ ಅಂಬಾರಿ ಹೊತ್ತಿದ್ದು, ಐದನೇ ಬಾರಿಗೆ ಅಂಬಾರಿ ಹೊರಲು ಸಿದ್ದನಾಗಿದ್ದಾನೆ.
ದಸರಾ ಮಹೋತ್ಸವದ ಚಿನ್ನದ ಅಂಬಾರಿಯನ್ನು ಹೊರುವ ಕ್ಯಾಪ್ಟನ್ ಅಭಿಮನ್ಯುವಿನ ಮಾವುತ ಜೆ.ಎಸ್ ವಂಸತ ಅವರು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ. ಜೆ.ಎಸ್ ವಂಸತ ಅವರು 100ಕ್ಕೂ ಹೆಚ್ಚು ಕಾಡಾನೆ ಹಾಗೂ ಹುಲಿ ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. 2017ರಲ್ಲಿ ಇಂಡೋನೇಷ್ಯಾ ದೇಶಕ್ಕೆ ಹೋಗಿ ಅಲ್ಲಿಯ ಆನೆಗಳಿಗೆ ಕೂಡ ತರಬೇತಿಯನ್ನು ಪಡೆಯಲು ಹಾಗೂ ರಾಜ್ಯದಲ್ಲಿ ಹಾಗೂ ಶಿಬಿರಗಳಲ್ಲಿ ನೀಡುವ ತರಬೇತಿಯನ್ನು ನೀಡಿದ್ದಾರೆ.
2020 ಮತ್ತು 21ನೇ ಸಾಲಿನಲ್ಲಿ ಎರಡು ವರ್ಷಗಳ ಕಾಲ ಮೈಸೂರು ದಸರಾ ನಾಡಹಬ್ಬದಲ್ಲಿ ಅಂಬಾರಿಯನ್ನು ಹೊರಿಸುವ ಮೂಲಕ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮಾನವ-ವನ್ಯಪ್ರಾಣಿ ಸಂಘರ್ಷದ ನಿಯಂತ್ರಣದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜೆ.ಎಸ್ ವಸಂತ ಅವರ ಈ ಎಲ್ಲ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿದೆ
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…