Featured

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ – vishwanews24

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್  ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ.

ವಿನೋಬಾ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಮರಗಳ ಹನನ ಆಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಫ್ಲೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಹಾಗೂ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

 

 

 

 

 

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago