ಮೈಸೂರು: ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಬುಧವಾರ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಈ ಗುಡ್ಡ ಕುಸಿತ ಸಂಭವಿಸಿದೆ. ಹೆಚ್ಚು ಕಡಿಮೆ 60 ಅಡಿಗಳಷ್ಟು ಗುಡ್ಡ ಕುಸಿದಿದೆ. ಗುಡ್ಡ ಕುಸಿತದಿಂದ ಪ್ರವಾಸಿಗರ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.
ಮೈಸೂರಿನಲ್ಲಿ ಧಾರಾಕಾರ ಮಳೆ ಬಂದಿದ್ದು ಕಳೆದ 10 ದಿನಗಳಿಗೆ ಹೋಲಿಸಿದರೆ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ದೊಡ್ಡ ಮಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಎರಡು ವರ್ಷದ ಹಿಂದೆಯೂ ಇದೇ ಮಾರ್ಗದ ಮತ್ತೊಂದು ಭಾಗದಲ್ಲಿ ಗುಡ್ಡ ಕುಸಿತವಾಗಿತ್ತು.
ಕಳೆದ ಕೆಲದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…