Featured

ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು – vishwanews24

ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು

ಮೈಸೂರು: ಮೂರು ವರ್ಷಗಳ ಹಿಂದೆ ಶಿಥಿಲಗೊಂಡು ಕುಸಿದಿದ್ದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕಟ್ಟಡದ ಮೇಲ್ಛಾವಣಿ ಮಂಗಳವಾರ ಪೂರ್ಣ ಕುಸಿದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.

ಬುಧವಾರ ಮಹರಾಣಿ ಮಹಿಳಾ ಕಾಲೇಜಿನ ಮೇಲ್ಚಾವಣಿ ಕುಸಿದು 13 ಮಂದಿ ಕಾರ್ಮಿಕರು ಹೊರಬಂದಿದ್ದರು. ಓರ್ವ ಕಾರ್ಮಿಕ ಸದ್ದಾಂ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದ. ಮಂಗಳವಾರ ಸಂಜೆಯಿಂದಲೇ ಅಗ್ನಿಶಾಮಕ ದಳ ಪೊಲೀಸರು ಮತ್ತು ನುರಿತ ಕೆಲಸಗಾರರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದರು. ಬುಧವಾರ ಬೆಳಗಿನ ಜಾವ ಅವಶೇಷಗಳಡಿಯಲ್ಲಿ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿರುವುದು ದೃಡಪಟ್ಟಿದೆ.

ಮಂಗಳವಾರ ಸಂಜೆಯಿಂದಲೇ ಶಾಸಕ ಕೆ.ಹರೀಶ್ ಗೌಡ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸ್ಥಳದಲ್ಲೇ ಇದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆಗೆ ಮುಂದಾಗಿದ್ದರು. ಆದರೆ ಅದು ಸಾಧ್ಯವಾಗದೆ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago