Featured

ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು – vishwanews24

ಮೈಸೂರು: ಮಹಾರಾಣಿ ಕಾಲೇಜು ಕಟ್ಟಡದ ಮೇಲ್ಛಾವಣಿ ಕುಸಿತ ಪ್ರಕರಣ; ಅವಶೇಷಗಳಡಿ ಸಿಲುಕಿದ್ದ ಓರ್ವ ಕಾರ್ಮಿಕ ಸಾವು

ಮೈಸೂರು: ಮೂರು ವರ್ಷಗಳ ಹಿಂದೆ ಶಿಥಿಲಗೊಂಡು ಕುಸಿದಿದ್ದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕಟ್ಟಡದ ಮೇಲ್ಛಾವಣಿ ಮಂಗಳವಾರ ಪೂರ್ಣ ಕುಸಿದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.

ಬುಧವಾರ ಮಹರಾಣಿ ಮಹಿಳಾ ಕಾಲೇಜಿನ ಮೇಲ್ಚಾವಣಿ ಕುಸಿದು 13 ಮಂದಿ ಕಾರ್ಮಿಕರು ಹೊರಬಂದಿದ್ದರು. ಓರ್ವ ಕಾರ್ಮಿಕ ಸದ್ದಾಂ ಕಟ್ಟಡದ ಒಳಗೆ ಸಿಲುಕಿಕೊಂಡಿದ್ದ. ಮಂಗಳವಾರ ಸಂಜೆಯಿಂದಲೇ ಅಗ್ನಿಶಾಮಕ ದಳ ಪೊಲೀಸರು ಮತ್ತು ನುರಿತ ಕೆಲಸಗಾರರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದರು. ಬುಧವಾರ ಬೆಳಗಿನ ಜಾವ ಅವಶೇಷಗಳಡಿಯಲ್ಲಿ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿರುವುದು ದೃಡಪಟ್ಟಿದೆ.

ಮಂಗಳವಾರ ಸಂಜೆಯಿಂದಲೇ ಶಾಸಕ ಕೆ.ಹರೀಶ್ ಗೌಡ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸ್ಥಳದಲ್ಲೇ ಇದ್ದು, ಅವಶೇಷಗಳಡಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆಗೆ ಮುಂದಾಗಿದ್ದರು. ಆದರೆ ಅದು ಸಾಧ್ಯವಾಗದೆ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

5 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago