ಮೈಸೂರು: ಶೀಘ್ರದಲ್ಲಿಯೇ ಜಿಲ್ಲೆಯ ಪಾಸಿಟಿವಿಟಿ ಪ್ರಮಾಣವನ್ನು ಶೇ. 5ಕ್ಕಿಂತ ಕಡಿಮೆ ಮಾಡಿ ಅನ್ಲಾಕ್ ಮಾಡುವಂತೆ ಕೆಲಸ ಮಾಡುತ್ತೇವೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈಸೂರಿನಲ್ಲಿ ಮೇ ತಿಂಗಳು ಒಂದರಲ್ಲೇ ಸಾವಿರಕ್ಕಿಂತ ಹೆಚ್ಚು ಜನ ನಿಧನರಾಗಿದ್ದಾರೆ. ಗ್ರಾಮಾಂತರ ಭಾಗದ ಸೋಂಕಿತರು ಕಾಯಿಲೆ ಉಲ್ಬಣಗೊಂಡ ಬಳಿಕ ಮೈಸೂರಿಗೆ ಬಂದು ನಿಧನರಾಗುತ್ತಿದ್ದಾರೆ. ಶೇ.10ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇದೆ. ಅದನ್ನು ಕಡಿಮೆ ಮಾಡಬೇಕಿದೆ. ಪಾಸಿಟಿವ್ ರೇಟ್ ಕಡಿಮೆ ಮಾಡಲು 10 ದಿನಗಳಿಂದ ಸಮಾರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇದೆಲ್ಲದರ ಬಗ್ಗೆ ಅರಿವಿರುವುದರಿಂದ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ,” ಎಂದರು.
“ಮೈಸೂರಿನಲ್ಲಿ ಕೆಟ್ಟ ಪರಿಸ್ಥಿತಿ ಇದೆ. ಹಳ್ಳಿ ಕಡೆಗೆ ಜಿಲ್ಲಾಡಳಿತ ಗಮನಹರಿಸಲಿ ಎಂದು ಒಂದು ತಿಂಗಳ ಹಿಂದೆಯೇ ಬಹಿರಂಗವಾಗಿ ಹೇಳಿದ್ದೆ. ನಾನು ಅವತ್ತು ಹೇಳಿದ್ದು ಸತ್ಯ ಎಂದು ಈಗ ಜನರಿಗೆ ಅರಿವಾಗಿದೆ,” ಎಂದು ಹೇಳಿದರು.
”ಮೂರನೇ ಅಲೆ ತಡೆಯಲು ಈಗಾಗಲೇ ಸಜ್ಜಾಗಿದ್ದೇವೆ. ಸ್ಕ್ಯಾನ್ ರೇನಲ್ಲಿ ಕಳೆದ ತಿಂಗಳಿನಲ್ಲಿಯೇ ಮೂರನೇ ಅಲೆ ಬಗ್ಗೆ ಸಭೆ ನಡೆಸಿದ್ದೇವೆ. ಈ ವೇಳೆ 29 ಮಕ್ಕಳ ತಜ್ಞರು ಬಂದಿದ್ದರು. ಒಂದೇ ಕ್ಯಾಂಪಸ್ನಲ್ಲಿ ಮಕ್ಕಳಿಗಾಗಿ 500 ಬೆಡ್ಗಳ ವ್ಯವಸ್ಥೆ ಮಾಡಲಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಟ್ರಾಮಾ ಕೇರ್, ಜಿಲ್ಲಾಸ್ಪತ್ರೆ ಸೇರಿ ಒಂದೇ ಕಡೆ ವ್ಯವಸ್ಥೆ ಮಾಡಲು ಆಲೋಚಿಸಲಾಗಿದೆ,” ಎಂದು ಹೇಳಿದರು.
”ವೆಂಟಿಲೇಟರ್ ಯಾವ ಮಕ್ಕಳಿಗೆ ಮಾಡಿ ಫೈ ಮಾಡಬೇಕು ಅನ್ನುವುದನ್ನು ಯೋಚನೆ ಮಾಡಿದ್ದೇವೆ. ಯಾವ ಮಕ್ಕಳು ಕೊರೊನಾದಿಂದ ದಾಖಲಾಗಬಾರದು ಅನ್ನೋದಷ್ಟೇ ನಮ್ಮ ಉದ್ದೇಶ. ಮಕ್ಕಳಲ್ಲಿ ಕೊರೊನಾ ತಡೆಯಲು ಪೋಷಕರಿಗೆ ವ್ಯಾಕ್ಸಿನ್ ನೀಡಲು ಸಿದ್ದತೆ ಮಾಡಿಕೊಂಡಿದ್ದೇವೆ,” ಎಂದು ತಿಳಿಸಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…