ಮೈಸೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ಅದರಲ್ಲೂ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ ಆತಂಕ ತಂದಿದೆ. ಹೀಗಾಗಿ ಹೆಚ್ಚುತ್ತಿರುವ ಸೋಂಕನ್ನು ತಡೆಯುವ ಸಲುವಾಗಿ ಸಾರ್ವಜನಿಕರು ಸಾಮೂಹಿಕವಾಗಿ ಸೇರುವುದನ್ನು ತಪ್ಪಿಸುವ ಸಲುವಾಗಿ ಪ್ರಖ್ಯಾತ ದೇಗುಲವಾದ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಕೆಲವು ಸಮಯಗಳ ಹಿಂದೆ ವಿಶೇಷ ದಿನಗಳಲ್ಲಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತಾದರೂ ಸಾಮಾನ್ಯ ದಿನಗಳಲ್ಲಿ ಪ್ರವೇಶ ನೀಡಲಾಗಿತ್ತು. ಹೀಗಾಗಿ ಸ್ಥಳೀಯರು ಮಾತ್ರವಲ್ಲದೆ, ದೂರದ ಊರುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ದೇಗುಲಕ್ಕೆ ಭಕ್ತರು ಭೇಟಿ ನೀಡುತ್ತಿದ್ದರು.
ಇದೀಗ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಏ. 21ರ ರಾತ್ರಿ 9ಗಂಟೆಯಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಒಂದೆಡೆಯಾದರೆ ವಾರಾಂತ್ಯದಲ್ಲಿ ಪ್ರವಾಹೋಪಾದಿಯಲ್ಲಿ ಜನ ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರುತ್ತಿದ್ದರು. ಸಾಮಾನ್ಯವಾಗಿ ಪಾದದಿಂದ ಸುಮಾರು ಒಂದು ಸಾವಿರ ಮೆಟ್ಟಿಲುಗಳನ್ನೇರುವ ಮೂಲಕ ಮುಂಜಾನೆಯ ವ್ಯಾಯಾಮ ಮಾಡುವ ಜನರಿದ್ದಾರೆ. ಇವರು ಖಾಯಂ ಆಗಿ ಬರುತ್ತಾರೆ. ಮುಂಜಾನೆ ಐದು ಗಂಟೆಯಿಂದಲೇ ಬೆಟ್ಟವೇರಲು ಜನ ಬರುತ್ತಾರೆ. ಒಂದು ಸಾವಿರ ಮೆಟ್ಟಿಲೇರಿ ಚಾಮುಂಡೇಶ್ವರಿ ದೇಗುಲಕ್ಕೊಂದು ಸುತ್ತು ಹೊಡೆದು ಮರಳುವ ಅಭ್ಯಾಸವನ್ನು ಹಲವರು ಮಾಡಿಕೊಂಡಿದ್ದಾರೆ. ಆದರೆ ವಾರದಲ್ಲಿ ಮಂಗಳವಾರ, ಶುಕ್ರವಾರ ಮತ್ತು ವಾರಾಂತ್ಯದ ದಿನವಾದ ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಮೆಟ್ಟಿಲು ಹತ್ತುತ್ತಾರೆ.
ಹಳೆಯಂಗಡಿ : ಸಿಡಿಲು ಬಂಡಿದು ಗಂಭೀರ ಸ್ಥಿತಿಯಲ್ಲಿದ್ದ ಮತ್ತೋರ್ವ ಬಾಲಕ ಸಾವು -Vshwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…