Featured

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24

ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24

ಮೈಸೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು ಅದರಲ್ಲೂ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ ಆತಂಕ ತಂದಿದೆ. ಹೀಗಾಗಿ ಹೆಚ್ಚುತ್ತಿರುವ ಸೋಂಕನ್ನು ತಡೆಯುವ ಸಲುವಾಗಿ ಸಾರ್ವಜನಿಕರು ಸಾಮೂಹಿಕವಾಗಿ ಸೇರುವುದನ್ನು ತಪ್ಪಿಸುವ ಸಲುವಾಗಿ ಪ್ರಖ್ಯಾತ ದೇಗುಲವಾದ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.

ಕೆಲವು ಸಮಯಗಳ ಹಿಂದೆ ವಿಶೇಷ ದಿನಗಳಲ್ಲಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತಾದರೂ ಸಾಮಾನ್ಯ ದಿನಗಳಲ್ಲಿ ಪ್ರವೇಶ ನೀಡಲಾಗಿತ್ತು. ಹೀಗಾಗಿ ಸ್ಥಳೀಯರು ಮಾತ್ರವಲ್ಲದೆ, ದೂರದ ಊರುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ದೇಗುಲಕ್ಕೆ ಭಕ್ತರು ಭೇಟಿ ನೀಡುತ್ತಿದ್ದರು.

ಕೊರೊನಾ ಪಾಸಿಟಿವ್ ಬಂದ್ರೆ ಹೆದರಬೇಡಿ, ಧೃತಿಗೆಡಬೇಡಿ ; ಆತ್ಮವಿಶ್ವಾಸದಿಂದ ಇರಿ, ಸರ್ಕಾರ ನಿಮ್ಮ ಜೊತೆಗಿದೆ : ಸುಧಾಕರ್ -Vishwanews24

ಇದೀಗ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಏ. 21ರ ರಾತ್ರಿ 9ಗಂಟೆಯಿಂದ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಒಂದೆಡೆಯಾದರೆ ವಾರಾಂತ್ಯದಲ್ಲಿ ಪ್ರವಾಹೋಪಾದಿಯಲ್ಲಿ ಜನ ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರುತ್ತಿದ್ದರು. ಸಾಮಾನ್ಯವಾಗಿ ಪಾದದಿಂದ ಸುಮಾರು ಒಂದು ಸಾವಿರ ಮೆಟ್ಟಿಲುಗಳನ್ನೇರುವ ಮೂಲಕ ಮುಂಜಾನೆಯ ವ್ಯಾಯಾಮ ಮಾಡುವ ಜನರಿದ್ದಾರೆ. ಇವರು ಖಾಯಂ ಆಗಿ ಬರುತ್ತಾರೆ. ಮುಂಜಾನೆ ಐದು ಗಂಟೆಯಿಂದಲೇ ಬೆಟ್ಟವೇರಲು ಜನ ಬರುತ್ತಾರೆ. ಒಂದು ಸಾವಿರ ಮೆಟ್ಟಿಲೇರಿ ಚಾಮುಂಡೇಶ್ವರಿ ದೇಗುಲಕ್ಕೊಂದು ಸುತ್ತು ಹೊಡೆದು ಮರಳುವ ಅಭ್ಯಾಸವನ್ನು ಹಲವರು ಮಾಡಿಕೊಂಡಿದ್ದಾರೆ. ಆದರೆ ವಾರದಲ್ಲಿ ಮಂಗಳವಾರ, ಶುಕ್ರವಾರ ಮತ್ತು ವಾರಾಂತ್ಯದ ದಿನವಾದ ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನ ಮೆಟ್ಟಿಲು ಹತ್ತುತ್ತಾರೆ.

ಹಳೆಯಂಗಡಿ : ಸಿಡಿಲು ಬಂಡಿದು ಗಂಭೀರ ಸ್ಥಿತಿಯಲ್ಲಿದ್ದ ಮತ್ತೋರ್ವ ಬಾಲಕ ಸಾವು -Vshwanews24

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago