ಬೆಂಗಳೂರು : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಯಾರು ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆಯ ಬಗ್ಗೆ ಕೆಲವೊಂದು ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು. ಇದಕ್ಕೆ ಸರ್ಕಾರ ಸ್ಪಷ್ಟನೆ ನೀಡಿದೆ.
ಮೊಟ್ಟೆ ಸೇವನೆ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕಳೆದ ವರ್ಷ 147 ಮೊಟ್ಟೆ ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಪರೀಕ್ಷಿಸಿದ ಮಾದರಿಗಳಲ್ಲಿ ಕೇವಲ ಒಂದು ಫೇಲ್ ಆಗಿದ್ದು, ಉಳಿದವು ಉತ್ತಮವಾಗಿದ್ದವು. ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು, ಸೇವಿಸಬಹುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಮೊಟ್ಟೆಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಮೊಟ್ಟೆಯನ್ನು ಶಾಲಾ ಮಕ್ಕಳಿಗೆ ಕೊಡಬಹುದು, ತಿನ್ನಬಹುದು, ಆರೋಗ್ಯಕರವಾಗಿದೆ ಎಂದು ಸ್ಪಷ್ಟಪಡಿಸಿದರು.
ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ನಿರ್ದಿಷ್ಟ ಬ್ರ್ಯಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ `ಜೀನೋಟಾಕ್ಸಿಕ್’ ಕೂಡಿದೆ ಎಂಬ ವಿಡಿಯೋ ಹರಿದಾಡುತ್ತಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಉಂಟು ಮಾಡಿತ್ತು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…