Featured

ಮೊಟ್ಟೆ ಬೆಲೆ ಏರಿಕೆಯಾದ್ರೂ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು : ಶಿಕ್ಷಣ ಇಲಾಖೆ ಸೂಚನೆ – Vishwanews24

ಮೊಟ್ಟೆ ಬೆಲೆ ಏರಿಕೆಯಾದ್ರೂ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಬೇಕು : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ರಾಜ್ಯದ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲಾಗುತ್ತಿದ್ದು, ಹೆಚ್ಚಿನ ಮಕ್ಕಳು ಮೊಟ್ಟನೇ ಬೇಕು ಎಂದು ಹೇಳುತ್ತಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರವಾಗಿ ಶಿಕ್ಷಣ ಇಲಾಖೆ ಮಕ್ಕಳ ಅಭಿಪ್ರಾಯ ಸಂಗ್ರಹಿಸಿದ್ದು, ಹೆಚ್ಚಿನ ಮಕ್ಕಳು ತಮಗೆ ಮೊಟ್ಟೆಯೇ ಬೇಕು ಎಂದು ಹೇಳಿದ್ದಾರೆ.

ಹೀಗಾಗಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಮೊಟ್ಟೆ ಕೊಡುವುದನ್ನು ನಿಲ್ಲಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಶಿಕ್ಷಣ ಇಲಾಖೆಯು ರಾಜ್ಯದ ಒಟ್ಟು 47.97 ಲಕ್ಷ ಸರ್ಕಾರಿ ಶಾಲಾ ಮಕ್ಕಳ ಅಭಿಪ್ರಾಯ ಸಂಗ್ರಹಿಸಿದ್ದು, ಈ ಪೈಕಿ 28.97 ಲಕ್ಷ ಮಕ್ಕಳು ಮೊಟ್ಟೆ ಬೇಕು ಎಂದಿದ್ದಾರೆ. 3.37 ಲಕ್ಷ ಮಕ್ಕಳು ಬಾಳೆಹಣ್ಣು ಕೇಳಿದ್ರೆ, 2.27 ಲಕ್ಷ ವಿದ್ಯಾರ್ಥಿಗಳು ಚಿಕ್ಕಿಬೇಕು ಎಂದು ಹೇಳಿದ್ದಾರೆ. ಹೀಗಾಗಿ ಮೊಟ್ಟೆ ಬೆಲೆ ಏರಿಕೆಯಾದ್ರೂ ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂದು ಹೇಳಿದೆ.

ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಮಾತ್ರ ಚಿಕ್ಕಿ ನೀಡಬಹುದು. ಆದರೆ ಕೆಲವು ಕಡೆ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು, ಚಿಕ್ಕಿ ನೀಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಆದ್ದರಿಂದ ಮೊಟ್ಟೆ ಕೇಳಿದವರಿಗೆ ಮೊಟ್ಟೆಯನ್ನೇ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago