ಬೆಂಗಳೂರು : ರಾಜ್ಯದ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲಾಗುತ್ತಿದ್ದು, ಹೆಚ್ಚಿನ ಮಕ್ಕಳು ಮೊಟ್ಟನೇ ಬೇಕು ಎಂದು ಹೇಳುತ್ತಿದ್ದಾರೆ.
ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರವಾಗಿ ಶಿಕ್ಷಣ ಇಲಾಖೆ ಮಕ್ಕಳ ಅಭಿಪ್ರಾಯ ಸಂಗ್ರಹಿಸಿದ್ದು, ಹೆಚ್ಚಿನ ಮಕ್ಕಳು ತಮಗೆ ಮೊಟ್ಟೆಯೇ ಬೇಕು ಎಂದು ಹೇಳಿದ್ದಾರೆ.
ಹೀಗಾಗಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಮೊಟ್ಟೆ ಕೊಡುವುದನ್ನು ನಿಲ್ಲಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಿಕ್ಷಣ ಇಲಾಖೆಯು ರಾಜ್ಯದ ಒಟ್ಟು 47.97 ಲಕ್ಷ ಸರ್ಕಾರಿ ಶಾಲಾ ಮಕ್ಕಳ ಅಭಿಪ್ರಾಯ ಸಂಗ್ರಹಿಸಿದ್ದು, ಈ ಪೈಕಿ 28.97 ಲಕ್ಷ ಮಕ್ಕಳು ಮೊಟ್ಟೆ ಬೇಕು ಎಂದಿದ್ದಾರೆ. 3.37 ಲಕ್ಷ ಮಕ್ಕಳು ಬಾಳೆಹಣ್ಣು ಕೇಳಿದ್ರೆ, 2.27 ಲಕ್ಷ ವಿದ್ಯಾರ್ಥಿಗಳು ಚಿಕ್ಕಿಬೇಕು ಎಂದು ಹೇಳಿದ್ದಾರೆ. ಹೀಗಾಗಿ ಮೊಟ್ಟೆ ಬೆಲೆ ಏರಿಕೆಯಾದ್ರೂ ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂದು ಹೇಳಿದೆ.
ಸರ್ಕಾರಿ ಶಾಲೆಯ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಯೋಜನೆಯನ್ನು ಶಿಕ್ಷಣ ಇಲಾಖೆ ಜಾರಿಗೆ ತಂದಿದೆ. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಮಾತ್ರ ಚಿಕ್ಕಿ ನೀಡಬಹುದು. ಆದರೆ ಕೆಲವು ಕಡೆ ಮಕ್ಕಳು ಮೊಟ್ಟೆ ಕೇಳಿದರೂ ಬಲವಂತವಾಗಿ ಬಾಳೆಹಣ್ಣು, ಚಿಕ್ಕಿ ನೀಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಆದ್ದರಿಂದ ಮೊಟ್ಟೆ ಕೇಳಿದವರಿಗೆ ಮೊಟ್ಟೆಯನ್ನೇ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…