ಕೊಡಗು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿಗೆ ಸಂಘ ಪರಿವಾರದ ಕಾರ್ಯಕರ್ತರು ಮೊಟ್ಟೆ ಹೊಡೆದು ವಿರೋಧ ವ್ಯಕ್ತಪಡಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ವಿಚಾರವಾಗಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊಡಗು ಜಿಲ್ಲಾ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ದ ಹರಿಹಾಯ್ದಿದ್ದಾರೆ. ಕೊಡಗಿನ ಗುಡ್ಡೆಹೊಸೂರುವಿನಲ್ಲಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಎಸೆದಿದ್ದು, ಬಿಜೆಪಿಯ ಕೆಲ ಕಾರ್ಯಕರ್ತರನ್ನ ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆದರೆ ಇದೇ ಪೊಲೀಸರ ವಿರುದ್ದ ಈಗ ಸಿದ್ದರಾಮಯ್ಯ ಕೆಂಡಾ ಮಂಡಲರಾಗಿದ್ದಾರೆ. ಪೊಲೀಸ್ ಭದ್ರತಾ ವೈಫಲ್ಯದ ಬಗ್ಗೆ, ಪೊಲೀಸರ ವಿರುದ್ದವೇ ಸಿದ್ದು ಗುಡುಗಿದ್ದು, ಅವರನ್ನು ಒದ್ದು ಒಳಗೆ ಹಾಕಲು ಆಗೋದಿಲ್ವಾ ನಿಮಗೆ. ಆರ್ಎಸ್ಎಸ್ ಗೂಂಡಗಳೊಂದಿಗೆ ಶಾಮೀಲಾಗಿದ್ದೀರಾ. ಪ್ರತಿಭಟನೆಗೆ ಬಿಟ್ಟು ತಮಾಷೆ ನೋಡ್ತೀರ ಎಂದು ಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಾವೇನು ಸುಮ್ಮನೆ ಕೂರುವುದಿಲ್ಲ ಆಗಸ್ಟ್ 26 ರಂದು ಕೊಡಗು ಎಸ್ಪಿ ಕಚೇರಿ ಮುತ್ತಿಗೆಗೆ ಸಿದ್ದು ಕರೆ ನೀಡಿದ್ದು, ನಾನು ಆ ದಿನ ಮಡಿಕೇರಿಗೆ ಬರುವುದಾಗಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…