Featured

ಮೊಟ್ಟೆ ಹಗರಣದ ಆರೋಪಿ ಶಶಿಕಲಾ ಜೊಲ್ಲೆಗೆ ಪುನಃ ಸಚಿವ ಪದವಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಖಂಡನೆ -Vishwanews24

ಮೊಟ್ಟೆ ಹಗರಣದ ಆರೋಪಿ ಶಶಿಕಲಾ ಜೊಲ್ಲೆಗೆ ಪುನಃ ಸಚಿವ ಪದವಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಖಂಡನೆ -Vishwanews24

ಶಶಿಕಲಾ ಜೊಲ್ಲೆ ಅವರಿಗೆ ಬೊಮ್ಮಾಯಿ ಮಂತ್ರಿಮಂಡಲದಲ್ಲಿ ಪುನಃ ಸಚಿವ ಸ್ಥಾನ ದೊರಕಿರುವುದು ದುರಾದೃಷ್ಟಕರ..

ಸ್ವಚ್ಛ ಹಾಗೂ ಪಾರದರ್ಶಕ ಆಡಳಿತವನ್ನು ರಾಜ್ಯದ ಜನತೆಗೆ ನೀಡುವ ಉದ್ದೇಶವೇ ಬಿಜೆಪಿಗಿಲ್ಲ..

ಉಡುಪಿ: ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸರ್ಕಾರದಿಂದ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪಕ್ಕೆ ಒಳಗಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಬೊಮ್ಮಾಯಿ ಮಂತ್ರಿಮಂಡಲದಲ್ಲಿ ಪುನಃ ಸಚಿವ ಸ್ಥಾನ ದೊರಕಿರುವುದು ದುರಾದೃಷ್ಟಕರ. ಸ್ವಚ್ಛ ಹಾಗೂ ಪಾರದರ್ಶಕ ಆಡಳಿತವನ್ನು ರಾಜ್ಯದ ಜನತೆಗೆ ನೀಡುವ ಉದ್ದೇಶವೇ ಬಿಜೆಪಿಗಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ.ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.

ಅಳಿಯ ಅಲ್ಲ ಮಗಳ ಗಂಡ ಎನ್ನುವಂತೆ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಮಾತ್ರ ಬದಲಾವಣೆ ಮಾಡಲಾಗಿದೆ.ಆಡಳಿತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಗೋಚರಿಸುತ್ತಿಲ್ಲ.ಬಿಜೆಪಿಯಲ್ಲಿ ಸ್ವಲ್ಪವಾದರೂ ನೈತಿಕತೆ ಅನ್ನುವುದು ಇದ್ದಿದ್ದರೆ ಶಶಿಕಲಾ ಜೊಲ್ಲೆ ಅವರಿಗೆ ಮಂತ್ರಿಗಿರಿ ಇಂದು ಸಿಗುತ್ತಿರಲಿಲ್ಲ.ಅವರು ನಡೆಸಿದ್ದಾರೆ ಎನ್ನಲಾಗಿರುವ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಿ,ಆರೋಪ ಸುಳ್ಳೆಂದು ಸಾಬೀತಾದಲ್ಲಿ ಮತ್ತೆ ಸಂಪುಟಕ್ಕೆ ಸೇರಿಸಿಕೊಂಡರೆ ಯಾರೂ ಆಕ್ಷೇಪಿಸುತ್ತಿರಲಿಲ್ಲ.ಆದರೆ ಮುಖ್ಯಮಂತ್ರಿಗಳು ಇದರ ಬಗ್ಗೆ ಒಂದಿನಿತೂ ತಲೆಕೆಡಿಸಿಕೊಳ್ಳದೇ ತೂಕಡಿಸುವವನಿಗೆ ಹಾಸಿಗೆ ಹಾಸಿಕೊಟ್ಟಂತೆ ಇನ್ನಷ್ಟು ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಟ್ಟಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದನ್ನು ಮಹಿಳಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ,ಮಾತ್ರವಲ್ಲ, ಶಶಿಕಲಾ ಅವರು ಎಸಗಿರುವ ಭ್ರಷ್ಟಾಚಾರದ ಬಗ್ಗೆ ತಕ್ಷಣ ತನಿಖೆ ನಡೆಸಬೇಕು.ಈ ತನಿಖೆ ಪೂರ್ತಿಯಾಗಿ ತೀರ್ಪು ಹೊರಬರುವ ವರೆಗೆ ಅವರಿಗೆ ನೀಡಲಾಗಿರುವ ಮಂತ್ರಿ ಪದವಿಯನ್ನು ಅಮಾನತು ಗೊಳಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳನ್ನು ಮಹಿಳಾ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂಬುದಾಗಿ ಗೀತಾ ವಾಗ್ಳೆ ಹೇಳಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago