Featured

ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24

ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ

ತಿರುವನಂತಪುರಂ: ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರೇಯಸಿಯೇ ಪ್ರಿಯಕರನಿಗೆ ವಿಷಪ್ರಾಶನ ನೀಡಿ ಹತ್ಯೆಗೈದಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ  ನಡೆದಿದೆ.

ಮೃತದುರ್ದೈವಿಯನ್ನು ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಎಂದು ಗುರುತಿಸಲಾಗಿದ್ದು, ಅಕ್ಟೋಬರ್ 25ರಂದು ಈತ ಮೃತಪಟ್ಟಿದ್ದಾನೆ. ಅಕ್ಟೋಬರ್ 31ರಂದು ಎಂಟು ಗಂಟೆಗಳ ಕಾಲ ನಡೆದ ವಿಚಾರಣೆ ಬಳಿಕ ಪ್ರೇಯಸಿಯೇ ತನ್ನ ಪ್ರಿಯಕರನನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

ಆರೋಪಿಯನ್ನು ಗ್ರೀಷ್ಮಾ ಎಂದು ಗುರುತಿಸಲಾಗಿದ್ದು, ಲವ್ ಬ್ರೇಕ್ ಅಪ್ ಮಾಡಿಕೊಳ್ಳುವುದಕ್ಕಾಗಿ ಶರೋನ್ ರಾಜ್ ಅನ್ನು ಕೊಂದಿರುವುದಾಗಿ ಸತ್ಯ ಬಾಯ್ಬಿಟ್ಟಿದ್ದಾಳೆ. ಕೊಲೆ ಮಾಡಲು ಮೊದಲೇ ಪ್ರೀ ಪ್ಲಾನ್ ಮಾಡಿದ್ದ ಗ್ರೀಷ್ಮಾ ಅಕ್ಟೋಬರ್ 14 ರಂದು ಶರೋನ್ ರಾಜ್ ಅನ್ನು ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಕಷಾಯದೊಂದಿಗೆ ಕೀಟನಾಶಕವನ್ನು ಬೆರೆಸಿ ಕುಡಿಸಿದ್ದಾಳೆ. ಇದಾದ ಬಳಿಕ ಪ್ರಿಯಕರ ವಾಂತಿ ಮಾಡಿಕೊಳ್ಳಲು ಆರಂಭಿಸಿ, ಬಳಿಕ ಸ್ನೇಹಿತನೊಂದಿಗೆ ತೆರಳಿದನು. ಇದನ್ನೂ ಓದಿ: ಮಂಗಳೂರು: ಜ. 6ರಂದು ಕುದ್ರೋಳಿಯಿಂದ ಬೆಂಗಳೂರುವರೆಗೆ ಐತಿಹಾಸಿಕ ಪಾದಯಾತ್ರೆ

ಗ್ರೀಷ್ಮಾ ಮತ್ತು ಶರೋನ್ ಒಂದು ವರ್ಷದಿಂದ ರಿಲೇಶನ್ ಶಿಪ್‍ನಲ್ಲಿದ್ದರು. ಅಲ್ಲದೇ ಮನೆಯವರು ಗ್ರೀಷ್ಮಾಗೆ ಬೇರೆಯವರೊಂದಿಗೆ ಮದುವೆ ನಿಶ್ಚಯ ಮಾಡಿದ್ದರು. ಫೆಬ್ರವರಿಯಿಂದ ಗ್ರೀಷ್ಮಾ ಹಾಗೂ ಶರೋನ್ ನಡುವೆ ಕೆಲವು ಮನಸ್ತಾಪಗಳು ಪ್ರಾರಂಭವಾಯಿತು. ಹೀಗಿದ್ದರೂ ಇಬ್ಬರೂ ರಿಲೇಶನ್ ಶಿಪ್ ಮಂದುವರೆಸಿದರು. ಆದರೆ ಇತ್ತೀಚೆಗೆ ಇವರಿಬ್ಬರ ನಡುವೆ ಮನಸ್ತಾಪ ಹೆಚ್ಚಾಗಿದ್ದರಿಂದ ಶರೋನ್ ಅನ್ನು ಬಿಡುವ ಸಲುವಾಗಿ, ವಿಷ ನೀಡಿ ಕೊಲ್ಲಲು ನಿರ್ಧರಿಸಿದಳು. ಮೊದಲಿಗೆ ಸಮಾಧಾನದಿಂದ ಮೃದು ಸ್ವಭಾವದಿಂದ ಬ್ರೇಕ್ ಅಪ್ ಮಾಡಿಕೊಳ್ಳೋಣ ಎಂದು ತಿಳಿಸಿದಳು. ಆದರೆ ಇದಕ್ಕೆ ಶರೋನ್ ರಾಜ್ ನಿರಾಕರಿಸಿದ್ದಾನೆ. ಅಲ್ಲದೇ ಜ್ಯೋತಿಷಿ ಒಬ್ಬರು ಗ್ರೀಷ್ಮಾ ಜಾತಕದ ಪ್ರಕಾರ, ಆಕೆಯ ಮೊದಲ ಪತಿ ಸಾಯುತ್ತಾನೆ ಎಂದು ಹೇಳಿದ್ದರು. ಇದರಿಂದ ಭಯಗೊಂಡು ಆತನೊಂದಿಗೆ ಬ್ರೇಕ್ ಮಾಡಿಕೊಳ್ಳಲು ಪ್ರಯತ್ನಿಸಿದಳು.

ಶರೋನ್‍ಗೆ ಏನು ನೀಡಿದ್ದಾಳೆ ಎಂದು ತಿಳಿದುಕೊಳ್ಳಲು ಆತನ ಸಹೋದರ ಗ್ರೀಷ್ಮಾಗೆ ನಿರಂತರ ಕರೆ ಮಾಡುತ್ತಿದ್ದನು. ಆದರೆ ಭಯದಿಂದ ಏನನ್ನೂ ಕೂಡ ಆಕೆ ಹೇಳಿಕೊಳ್ಳಲಿಲ್ಲ. ಒಂದು ವೇಳೆ ಸತ್ಯ ತಿಳಿಸಿದ್ದರೆ ಆತನನ್ನು ಉಳಿಸಬಹುದಾಗಿತ್ತು. ಅಕ್ಟೋಬರ್ 25 ರಂದು ಶರೋನ್ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು. ಆತನ ಸಾವಿಗೆ ಪ್ರೇಯಸಿಯೇ ಕಾರಣ ಎಂದು ಶರೋನ್ ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಿರ್ದೇಶಕ `ಸಯ್ಯದ್ ಅಶ್ರಫ್’ ಹೃದಯಾಘಾತದಿಂದ ನಿಧನ – Vishwanews24

ಈ ಪ್ರಕರಣ ಸಂಬಂಧ ಅಕ್ಟೋಬರ್ 20 ರಂದು ಶರೋನ್ ಪೊಲೀಸರಿಗೆ ಹೇಳಿಕೆ ನೀಡಿದ್ದು, ತಾನೂ ಯಾರ ಮೇಲೂ ಅನುಮಾನ ಹೊಂದಿಲ್ಲ ಎಂದು ತಿಳಿಸಿ ಕೊನೆಯುಸಿರೆಳೆದಿದ್ದಾನೆ. ಇದೀಗ 8 ಗಂಟೆಗಳ ವಿಚಾರಣೆಯ ಬಳಿಕ ತಪ್ಪೊಪ್ಪಿಕೊಂಡ ಗ್ರೀಷ್ಮಾಳನ್ನು ತಿರುವನಂತಪುರಂನಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago