ಮೊದಲ ಟಿ20 ಪಂದ್ಯ: ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ -Vishwanews24

ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ.

ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು ಬೆನ್ನತ್ತಿದ್ದ ಭಾರತ ಕೆ.ಎಲ್. ರಾಹುಲ್ (56), ಶ್ರೇಯಸ್ ಅಯ್ಯರ್ (ಅಜೇಯ 58) ಅವರ ಭರ್ಜರಿ ಅರ್ಧಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ (45) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 06 ವಿಕೆಟ್ ಗಳ ಗೆಲುವನ್ನು ತನ್ನದಾಗಿಸಿಕೊಂಡಿತು. 19 ಓವರ್ ಗಳಲ್ಲಿ ಭಾರತ ಗೆಲುವಿನ ಗುರಿ ಮುಟ್ಟಿತು.

ಇದಕ್ಕೂ ಮೊದಲು ಟಾಸ್ ಗೆದ್ದ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡನ್ನು ಬ್ಯಾಟಿಂಗ್ ಗೆ ಇಳಿಸಿದರು. ಕಾಲಿನ್ ಮನ್ರೋ (59), ನಾಯಕ ಕೇನ್ ವಿಲಿಯಮ್ಸನ್ (26 ಎಸೆತೆಗಳಲ್ಲಿ 51) ಮತ್ತು ಇನ್ನಿಂಗ್ಸ್ ನ ಕೊನೆಯಲ್ಲಿ ಅನುಭವಿ ರಾಸ್ ಟಯ್ಲರ್ (27 ಎಸೆತಗಳಲ್ಲಿ ಅಜೇಯ 54) ಅವರ ಸ್ಪೋಟಕ ಆಟದ ನೆರವಿನಿಂದ ನ್ಯೂಝಿಲ್ಯಾಂಡ್ ನಿಗದಿತ 20 ಓವರುಗಳಲ್ಲಿ 05 ವಿಕೆಟ್ ಗಳನ್ನು ಕಳೆದುಕೊಂಡು 203 ರನ್ ಗಳನ್ನು ಕಲೆ ಹಾಕಿತು.

ಈ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತಕ್ಕೆ ಉತ್ತಮ ಆರಂಭವೇನೂ ಲಭಿಸಲಿಲ್ಲ. ತಂಡದ ಮೊತ್ತ 16 ಆಗುವಷ್ಟರಲ್ಲಿ ರೋಹಿತ್ ಶರ್ಮಾ 07 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ರಾಹುಲ್ ಜೊತೆಯಾದ ವಿರಾಟ್ ಕೊಹ್ಲಿ ಕಿವೀಸ್ ಬೌಲರ್ ಗಳನ್ನು ದಂಡಿಸುತ್ತಾ ತಂಡದ ಮೊತ್ತವನ್ನು ಏರಿಸುವ ಜೊತೆಯಾಟವನ್ನು ಕಟ್ಟಿದರು. ಎರಡನೇ ವಿಕೆಟಿಗೆ ಈ ಜೋಡಿ 99 ರನ್ ಗಳನ್ನು ಕಲೆಹಾಕುವ ಮೂಲಕ ಗೆಲುವಿನ ಬುನಾದಿಯನ್ನು ಕಟ್ಟಿಕೊಟ್ಟರು.

ಈ ಸಂದರ್ಭದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಕೆ.ಎಲ್. ರಾಹುಲ್ ಅವರು 56 ರನ್ ಗಳಿಸಿ ಔಟಾದರು. ಇವರು ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ 56 ರನ್ ಸಿಡಿಸಿದ್ದು ವಿಶೇಷವಾಗಿತ್ತು

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago