ಮೊದಲ ಟಿ20 ಪಂದ್ಯ: ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ -Vishwanews24

ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ.

ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು ಬೆನ್ನತ್ತಿದ್ದ ಭಾರತ ಕೆ.ಎಲ್. ರಾಹುಲ್ (56), ಶ್ರೇಯಸ್ ಅಯ್ಯರ್ (ಅಜೇಯ 58) ಅವರ ಭರ್ಜರಿ ಅರ್ಧಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ (45) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 06 ವಿಕೆಟ್ ಗಳ ಗೆಲುವನ್ನು ತನ್ನದಾಗಿಸಿಕೊಂಡಿತು. 19 ಓವರ್ ಗಳಲ್ಲಿ ಭಾರತ ಗೆಲುವಿನ ಗುರಿ ಮುಟ್ಟಿತು.

ಇದಕ್ಕೂ ಮೊದಲು ಟಾಸ್ ಗೆದ್ದ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡನ್ನು ಬ್ಯಾಟಿಂಗ್ ಗೆ ಇಳಿಸಿದರು. ಕಾಲಿನ್ ಮನ್ರೋ (59), ನಾಯಕ ಕೇನ್ ವಿಲಿಯಮ್ಸನ್ (26 ಎಸೆತೆಗಳಲ್ಲಿ 51) ಮತ್ತು ಇನ್ನಿಂಗ್ಸ್ ನ ಕೊನೆಯಲ್ಲಿ ಅನುಭವಿ ರಾಸ್ ಟಯ್ಲರ್ (27 ಎಸೆತಗಳಲ್ಲಿ ಅಜೇಯ 54) ಅವರ ಸ್ಪೋಟಕ ಆಟದ ನೆರವಿನಿಂದ ನ್ಯೂಝಿಲ್ಯಾಂಡ್ ನಿಗದಿತ 20 ಓವರುಗಳಲ್ಲಿ 05 ವಿಕೆಟ್ ಗಳನ್ನು ಕಳೆದುಕೊಂಡು 203 ರನ್ ಗಳನ್ನು ಕಲೆ ಹಾಕಿತು.

ಈ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತಕ್ಕೆ ಉತ್ತಮ ಆರಂಭವೇನೂ ಲಭಿಸಲಿಲ್ಲ. ತಂಡದ ಮೊತ್ತ 16 ಆಗುವಷ್ಟರಲ್ಲಿ ರೋಹಿತ್ ಶರ್ಮಾ 07 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ರಾಹುಲ್ ಜೊತೆಯಾದ ವಿರಾಟ್ ಕೊಹ್ಲಿ ಕಿವೀಸ್ ಬೌಲರ್ ಗಳನ್ನು ದಂಡಿಸುತ್ತಾ ತಂಡದ ಮೊತ್ತವನ್ನು ಏರಿಸುವ ಜೊತೆಯಾಟವನ್ನು ಕಟ್ಟಿದರು. ಎರಡನೇ ವಿಕೆಟಿಗೆ ಈ ಜೋಡಿ 99 ರನ್ ಗಳನ್ನು ಕಲೆಹಾಕುವ ಮೂಲಕ ಗೆಲುವಿನ ಬುನಾದಿಯನ್ನು ಕಟ್ಟಿಕೊಟ್ಟರು.

ಈ ಸಂದರ್ಭದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಕೆ.ಎಲ್. ರಾಹುಲ್ ಅವರು 56 ರನ್ ಗಳಿಸಿ ಔಟಾದರು. ಇವರು ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ 56 ರನ್ ಸಿಡಿಸಿದ್ದು ವಿಶೇಷವಾಗಿತ್ತು

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago