ಮೊದಲ ಟಿ20 ಪಂದ್ಯ: ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ -Vishwanews24

ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ.

ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು ಬೆನ್ನತ್ತಿದ್ದ ಭಾರತ ಕೆ.ಎಲ್. ರಾಹುಲ್ (56), ಶ್ರೇಯಸ್ ಅಯ್ಯರ್ (ಅಜೇಯ 58) ಅವರ ಭರ್ಜರಿ ಅರ್ಧಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ (45) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 06 ವಿಕೆಟ್ ಗಳ ಗೆಲುವನ್ನು ತನ್ನದಾಗಿಸಿಕೊಂಡಿತು. 19 ಓವರ್ ಗಳಲ್ಲಿ ಭಾರತ ಗೆಲುವಿನ ಗುರಿ ಮುಟ್ಟಿತು.

ಇದಕ್ಕೂ ಮೊದಲು ಟಾಸ್ ಗೆದ್ದ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡನ್ನು ಬ್ಯಾಟಿಂಗ್ ಗೆ ಇಳಿಸಿದರು. ಕಾಲಿನ್ ಮನ್ರೋ (59), ನಾಯಕ ಕೇನ್ ವಿಲಿಯಮ್ಸನ್ (26 ಎಸೆತೆಗಳಲ್ಲಿ 51) ಮತ್ತು ಇನ್ನಿಂಗ್ಸ್ ನ ಕೊನೆಯಲ್ಲಿ ಅನುಭವಿ ರಾಸ್ ಟಯ್ಲರ್ (27 ಎಸೆತಗಳಲ್ಲಿ ಅಜೇಯ 54) ಅವರ ಸ್ಪೋಟಕ ಆಟದ ನೆರವಿನಿಂದ ನ್ಯೂಝಿಲ್ಯಾಂಡ್ ನಿಗದಿತ 20 ಓವರುಗಳಲ್ಲಿ 05 ವಿಕೆಟ್ ಗಳನ್ನು ಕಳೆದುಕೊಂಡು 203 ರನ್ ಗಳನ್ನು ಕಲೆ ಹಾಕಿತು.

ಈ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತಕ್ಕೆ ಉತ್ತಮ ಆರಂಭವೇನೂ ಲಭಿಸಲಿಲ್ಲ. ತಂಡದ ಮೊತ್ತ 16 ಆಗುವಷ್ಟರಲ್ಲಿ ರೋಹಿತ್ ಶರ್ಮಾ 07 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ರಾಹುಲ್ ಜೊತೆಯಾದ ವಿರಾಟ್ ಕೊಹ್ಲಿ ಕಿವೀಸ್ ಬೌಲರ್ ಗಳನ್ನು ದಂಡಿಸುತ್ತಾ ತಂಡದ ಮೊತ್ತವನ್ನು ಏರಿಸುವ ಜೊತೆಯಾಟವನ್ನು ಕಟ್ಟಿದರು. ಎರಡನೇ ವಿಕೆಟಿಗೆ ಈ ಜೋಡಿ 99 ರನ್ ಗಳನ್ನು ಕಲೆಹಾಕುವ ಮೂಲಕ ಗೆಲುವಿನ ಬುನಾದಿಯನ್ನು ಕಟ್ಟಿಕೊಟ್ಟರು.

ಈ ಸಂದರ್ಭದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಕೆ.ಎಲ್. ರಾಹುಲ್ ಅವರು 56 ರನ್ ಗಳಿಸಿ ಔಟಾದರು. ಇವರು ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ 56 ರನ್ ಸಿಡಿಸಿದ್ದು ವಿಶೇಷವಾಗಿತ್ತು

Vishwa News 24

Recent Posts

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

1 minute ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago