Featured

ಮೊದಲ ಬಾರಿಗೆ ಕರ್ನಲ್ ಆಗಿ ಬಡ್ತಿ ಪಡೆದ 108 ಮಹಿಳಾ ಯೋಧರು – Vishwanews24

ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ 108 ಮಹಿಳಾ ಯೋಧರು

ನವದೆಹಲಿ: ಲೆಫ್ಟಿನೆಂಟ್ ಕರ್ನಲ್‌ಗಳಾಗಿದ್ದ ಭಾರತೀಯ ಸೇನೆಯ 108 ಮಂದಿ ಮಹಿಳಾ ಯೋಧರು ಕರ್ನಲ್ ಆಗಿ ಬಡ್ತಿ ಪಡೆದುಕೊಳ್ಳಲಿದ್ದಾರೆ. ಆ ಮೂಲಕ ಅವರೆಲ್ಲರೂ ತಂಡ ಮುನ್ನಡೆಸುವ ಜವಾಬ್ದಾರಿ ಪಡೆದುಕೊಳ್ಳಲಿದ್ದಾರೆ.

ಲೆಫ್ಟಿನೆಂಟ್ ಕರ್ನಲ್ ಸೇವೆಯಲ್ಲಿರುವ ಮಹಿಳೆಯರಿಗೆ ಬಡ್ತಿ ನೀಡುವ ಪ್ರಕ್ರಿಯೆ ಜನವರಿ 9ರಿಂದ ಆರಂಭವಾಗಿದ್ದು, 22ರವರೆಗೆ ನಡೆಯಲಿದೆ. 1992ರಿಂದ 2006ನೇ ಬ್ಯಾಚ್‌ನ ಒಟ್ಟು 108 ಮಂದಿ ಮಹಿಳೆಯರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ. ಆ ಮೂಲಕ ತಮ್ಮ ತಂಡಗಳನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅವರು ಪಡೆದುಕೊಳ್ಳಲಿದ್ದಾರೆ.

ಎಂಜಿನಿಯರ್‍ಸ್, ಸಿಗ್ನಲ್‌ಗಳು, ಆರ್ಮಿ ಏರ್ ಡಿಫೆನ್ಸ್, ಇಂಟೆಲಿಜೆನ್ಸ್ ಕಾರ್ಪ್ಸ್, ಆರ್ಮಿ ಸರ್ವಿಸ್ ಕಾರ್ಪ್ಸ್, ಆರ್ಮಿ ಆರ್ಡನೆನ್ಸ್‌ ಕಾರ್ಪ್ಸ್, ಎಲೆಕ್ಟ್ರಿಕಲ್‌ ಆಂಡ್‌ ಮೆಕಾನಿಕಲ್‌ ಎಂಜಿನಿಯರ್‍ಸ್ ಸೇರಿದಂತೆ ಸೇನೆಯ ವಿವಿಧ ಶಸ್ತಾಸ್ತ್ರ ಮತ್ತು ಸೇವೆಗಳಲ್ಲಿರುವವರಿಗೆ ಬಡ್ತಿ ಪ್ರಕ್ರಿಯೆ ನಡೆಯುತ್ತಿದೆ. ಮೂರು ಹಂತದಲ್ಲಿ ಬಡ್ತಿ ಅವಕಾಶವಿದ್ದು, ಶೀಘ್ರ ಬಡ್ತಿ ಪಡೆದವರಿಗೆ ಮಾಹಿತಿ ನೀಡಲಾಗುತ್ತದೆ. 80 ಅಧಿಕಾರಿಗಳಿಗೆ ಈಗಾಗಲೇ ಬಡ್ತಿ ನೀಡಲಾಗಿದೆ ಎಂದು ಸೇನೆ ತಿಳಿಸಿರುವುದಾಗಿ ವರದಿಯಾಗಿದೆ.

ಆಯ್ಕೆ ಮಂಡಳಿ ಫಿಟ್ ಎಂದು ಘೋಷಿಸಲ್ಪಟ್ಟ ಬಳಿಕ ಮಹಿಳಾ ಅಧಿಕಾರಿಗಳನ್ನು ಕಮಾಂಡ್ ಅಸೈನ್‌ಮೆಂಟ್‌ಗಳಲ್ಲಿ ನಿಯೋಜನೆ ಮಾಡಲಾಗುತ್ತದೆ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

5 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

5 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 days ago