Featured

ಮೊದಲ ಬಾರಿಗೆ ಕರ್ನಲ್ ಆಗಿ ಬಡ್ತಿ ಪಡೆದ 108 ಮಹಿಳಾ ಯೋಧರು – Vishwanews24

ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ 108 ಮಹಿಳಾ ಯೋಧರು

ನವದೆಹಲಿ: ಲೆಫ್ಟಿನೆಂಟ್ ಕರ್ನಲ್‌ಗಳಾಗಿದ್ದ ಭಾರತೀಯ ಸೇನೆಯ 108 ಮಂದಿ ಮಹಿಳಾ ಯೋಧರು ಕರ್ನಲ್ ಆಗಿ ಬಡ್ತಿ ಪಡೆದುಕೊಳ್ಳಲಿದ್ದಾರೆ. ಆ ಮೂಲಕ ಅವರೆಲ್ಲರೂ ತಂಡ ಮುನ್ನಡೆಸುವ ಜವಾಬ್ದಾರಿ ಪಡೆದುಕೊಳ್ಳಲಿದ್ದಾರೆ.

ಲೆಫ್ಟಿನೆಂಟ್ ಕರ್ನಲ್ ಸೇವೆಯಲ್ಲಿರುವ ಮಹಿಳೆಯರಿಗೆ ಬಡ್ತಿ ನೀಡುವ ಪ್ರಕ್ರಿಯೆ ಜನವರಿ 9ರಿಂದ ಆರಂಭವಾಗಿದ್ದು, 22ರವರೆಗೆ ನಡೆಯಲಿದೆ. 1992ರಿಂದ 2006ನೇ ಬ್ಯಾಚ್‌ನ ಒಟ್ಟು 108 ಮಂದಿ ಮಹಿಳೆಯರು ಲೆಫ್ಟಿನೆಂಟ್ ಕರ್ನಲ್ ಹುದ್ದೆಯಿಂದ ಕರ್ನಲ್ ಹುದ್ದೆಗೆ ಪದೋನ್ನತಿ ಹೊಂದಲಿದ್ದಾರೆ. ಆ ಮೂಲಕ ತಮ್ಮ ತಂಡಗಳನ್ನು ಮುನ್ನಡೆಸುವ ಜವಾಬ್ದಾರಿಯನ್ನು ಅವರು ಪಡೆದುಕೊಳ್ಳಲಿದ್ದಾರೆ.

ಎಂಜಿನಿಯರ್‍ಸ್, ಸಿಗ್ನಲ್‌ಗಳು, ಆರ್ಮಿ ಏರ್ ಡಿಫೆನ್ಸ್, ಇಂಟೆಲಿಜೆನ್ಸ್ ಕಾರ್ಪ್ಸ್, ಆರ್ಮಿ ಸರ್ವಿಸ್ ಕಾರ್ಪ್ಸ್, ಆರ್ಮಿ ಆರ್ಡನೆನ್ಸ್‌ ಕಾರ್ಪ್ಸ್, ಎಲೆಕ್ಟ್ರಿಕಲ್‌ ಆಂಡ್‌ ಮೆಕಾನಿಕಲ್‌ ಎಂಜಿನಿಯರ್‍ಸ್ ಸೇರಿದಂತೆ ಸೇನೆಯ ವಿವಿಧ ಶಸ್ತಾಸ್ತ್ರ ಮತ್ತು ಸೇವೆಗಳಲ್ಲಿರುವವರಿಗೆ ಬಡ್ತಿ ಪ್ರಕ್ರಿಯೆ ನಡೆಯುತ್ತಿದೆ. ಮೂರು ಹಂತದಲ್ಲಿ ಬಡ್ತಿ ಅವಕಾಶವಿದ್ದು, ಶೀಘ್ರ ಬಡ್ತಿ ಪಡೆದವರಿಗೆ ಮಾಹಿತಿ ನೀಡಲಾಗುತ್ತದೆ. 80 ಅಧಿಕಾರಿಗಳಿಗೆ ಈಗಾಗಲೇ ಬಡ್ತಿ ನೀಡಲಾಗಿದೆ ಎಂದು ಸೇನೆ ತಿಳಿಸಿರುವುದಾಗಿ ವರದಿಯಾಗಿದೆ.

ಆಯ್ಕೆ ಮಂಡಳಿ ಫಿಟ್ ಎಂದು ಘೋಷಿಸಲ್ಪಟ್ಟ ಬಳಿಕ ಮಹಿಳಾ ಅಧಿಕಾರಿಗಳನ್ನು ಕಮಾಂಡ್ ಅಸೈನ್‌ಮೆಂಟ್‌ಗಳಲ್ಲಿ ನಿಯೋಜನೆ ಮಾಡಲಾಗುತ್ತದೆ.

ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago