ನವದೆಹಲಿ: ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ ನಡೆದಿದೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ತನ್ನ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 1975ರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಕುರಿತಾದ ಪ್ರತ್ಯೇಕ ಅಧ್ಯಾಯವನ್ನು ಮೊದಲ ಬಾರಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸಿದೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಅಡಿಯಲ್ಲಿ ಇಡೀ ದೇಶಾದ್ಯಂತ ಪರಿಷ್ಕರಿಸಲಾದ ಹೊಸ ಪಠ್ಯಪುಸ್ತಕಗಳು ಜಾರಿಗೆ ಬರುತ್ತಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ (2026-27) ವಿದ್ಯಾರ್ಥಿಗಳು ಇದನ್ನು ಓದಲಿದ್ದಾರೆ.
ಇದನ್ನೂ ಓದಿ:
ಹೊಸ ಪಠ್ಯದಲ್ಲಿ ಏನಿದೆ?
9ನೇ ತರಗತಿಯ ಪ್ರಜಾಪ್ರಭುತ್ವ ರಾಜಕೀಯ 1 ಪಠ್ಯಪುಸ್ತಕದ 5ನೇ ಅಧ್ಯಾಯದಲ್ಲಿ ತುರ್ತು ಪರಿಸ್ಥಿತಿಯನ್ನು “ಪ್ರಜಾಪ್ರಭುತ್ವಕ್ಕೆ ಎದುರಾದ ಸವಾಲು” ಎಂದು ವ್ಯಾಖ್ಯಾನಿಸಲಾಗಿದೆ. 1975 ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಜಾರಿಗೊಳಿಸಿದ 21 ತಿಂಗಳುಗಳ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ನಾಗರಿಕರ ವಾಕ್ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳನ್ನು ಹೇಗೆ ಕಸಿದುಕೊಳ್ಳಲಾಯಿತು ಎಂಬುದನ್ನು ವಿವರಿಸಲಾಗಿದೆ.
ಪತ್ರಿಕೋದ್ಯಮದ ಕತ್ತು ಹಿಸುಕಿ, ಮಾಧ್ಯಮಗಳ ಮೇಲೆ ಅಂದಿನ ಸರ್ಕಾರ ಹೇರಿದ್ದ ಕಠಿಣ ‘ಸೆನ್ಸಾರ್ಶಿಪ್’ ಹಾಗೂ ವಿರೋಧ ಪಕ್ಷದ ನಾಯಕರ ಸರಣಿ ಬಂಧನಗಳ ಇತಿಹಾಸವನ್ನು ತಿಳಿಸಲಾಗಿದೆ. ಈ ಕಪ್ಪು ಅವಧಿಯಲ್ಲಿ ಸರ್ಕಾರದ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಉಂಟಾದ ಸಂಘರ್ಷಗಳು ಹಾಗೂ ಗರಿಷ್ಠ ಮಟ್ಟದ ಅಧಿಕಾರ ದುರ್ಬಳಕೆಯ ಒಟ್ಟಾರೆ ಚಿತ್ರಣವನ್ನು ವಿದ್ಯಾರ್ಥಿಗಳಿಗೆ ಕಣ್ಣಿಗೆ ಕಟ್ಟುವಂತೆ ಪರಿಚಯಿಸಲಾಗಿದೆ.
ಇದನ್ನೂ ಓದಿ:
ಇಲ್ಲಿಯವರೆಗೆ ‘ತುರ್ತು ಪರಿಸ್ಥಿತಿ’ಯ ಇತಿಹಾಸ ಮತ್ತು ಅದರ ರಾಜಕೀಯ ಪರಿಣಾಮಗಳ ಕುರಿತಾದ ಅಧ್ಯಾಯಗಳು ಕೇವಲ 12ನೇ ತರಗತಿಯ ರಾಜಕೀಯ ವಿಜ್ಞಾನ ಪಠ್ಯಪುಸ್ತಕದಲ್ಲಿ ಮಾತ್ರ ಇರುತ್ತಿದ್ದವು.
ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬರಬಹುದಾದ ಆಪತ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲೇ (ಹೈಸ್ಕೂಲ್ ಹಂತದಲ್ಲೇ) ರಾಜಕೀಯ ಪ್ರಜ್ಞೆ ಮೂಡಿಸುವುದು ಅತ್ಯಗತ್ಯ. ಇದೇ ಕಾರಣಕ್ಕೆ ಇದನ್ನು 9ನೇ ತರಗತಿಯ ಪಠ್ಯಕ್ರಮಕ್ಕೆ ತರಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…