ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಮೊದಲ ಪತ್ರಿಕಾಗೋಷ್ಟಿಯಲ್ಲಿ ಹಲವು ಮಹತ್ವದ ಘೋಷಣೆ ಮಾಡಿದ್ದು ರಾಜ್ಯದಲ್ಲಿ ದಕ್ಷ, ಪ್ರಮಾಣಿಕ, ಕಟ್ಟಕಡೆಯ ಸಮಾಜದ ಪರ ಸರ್ಕಾರ ಇರಬೇಕು ಎಂದು ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೂರ್ಣಪ್ರಮಾಣದಲ್ಲಿ ಸಚಿವ ಸಂಪುಟ ರಚನೆಯಾಗಿಲ್ಲ, ನಾನೊಬ್ಬನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಆದರೂ ಆಡಳಿತದಲ್ಲಿ ಯಾವುದೇ ಕೆಲಸಗಳು ನಿಲ್ಲುವುದಿಲ್ಲ.ಇಂದು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಸಭೆಯಲ್ಲಿ ಸರ್ಕಾರದ ದಿಕ್ಸೂಚಿ ಬಗ್ಗೆ ಹೇಳಿದ್ದೇನೆ. ಟೀಂ ಆಗಿ ವರ್ಕ್ ಮಾಡಬೇಕು ಎಂದು ಸೂಚಿಸಿದ್ದೇನೆ ಎಂದರು.
ಇದೇ ವೇಳೆ ರೈತರ ಮಕ್ಕಳು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಹೊಸ ಶಿಷ್ಯ ವೇತನ ಜಾರಿಗೆ ತರಲು ₹೧೦೦೦ ಕೋಟಿ ಅನುದಾನ ಮೀಸಲಿಸಿದ್ದು ರೈತರ ಮಕ್ಕಳಿಗೆ ಹೊಸ ಶಿಷ್ಯ ವೇತನ ಜಾರಿ ಮಾಡಲಾಗುವುದು ಎಂದರು.
ಇದರೊಂದಿಗೆ ವಿಧವಾ ವೇತನವನ್ನು 600 ರೂ.ನಿಂದ 800 ರೂ. ಕ್ಕೆ ಹೆಚ್ಚಿಸಲಾಗಿದೆ. ವಿಶೇಷ ಚೇತನರಿಗೆ ವೇತನ 600 ರೂ.ನಿಂದ 800 ರೂ. ಹೆಚ್ಚಳ, ಸಂದ್ಯ ಸುರಕ್ಷಾ ಯೋಜನೆ ಫಲಾನುಭವಿಗಳಿಗೆ 1000 ರೂನಿಂದ 1,200 ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…