Featured

ಮೊದಲ ಸುದ್ದಿಗೋಷ್ಟಿಯಲ್ಲಿ ಹಲವು ಮಹತ್ವದ ಘೋಷಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ -Vishwanews24

ಮೊದಲ ಸುದ್ದಿಗೋಷ್ಟಿಯಲ್ಲಿ ಹಲವು ಮಹತ್ವದ ಘೋಷಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ -Vishwanews24

ರೈತರ ಮಕ್ಕಳು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಹೊಸ ಶಿಷ್ಯ ವೇತನ ಜಾರಿಗೆ ತರಲು ₹೧೦೦೦ ಕೋಟಿ ಅನುದಾನ.

ಸಂಧ್ಯಾ ಸುರಕ್ಷಾ ಯೋಜನೆಯ ಹಣ ₹1000- ₹1200ಕ್ಕೆ ಏರಿಕೆ.

ವಿಧವಾ ವೇತನ ₹600ರಿಂದ ₹800ಕ್ಕೆ ಏರಿಕೆ.

ವಿಶೇಷ ಚೇತನರ ಯೋಜನೆಗೆಯ ಹಣ ₹600 ರಿಂದ 800ಕ್ಕೆ ಏರಿಕೆ.

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಮೊದಲ ಪತ್ರಿಕಾಗೋಷ್ಟಿಯಲ್ಲಿ ಹಲವು ಮಹತ್ವದ ಘೋಷಣೆ ಮಾಡಿದ್ದು ರಾಜ್ಯದಲ್ಲಿ ದಕ್ಷ, ಪ್ರಮಾಣಿಕ, ಕಟ್ಟಕಡೆಯ ಸಮಾಜದ ಪರ ಸರ್ಕಾರ ಇರಬೇಕು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪೂರ್ಣಪ್ರಮಾಣದಲ್ಲಿ ಸಚಿವ ಸಂಪುಟ ರಚನೆಯಾಗಿಲ್ಲ, ನಾನೊಬ್ಬನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಆದರೂ ಆಡಳಿತದಲ್ಲಿ ಯಾವುದೇ ಕೆಲಸಗಳು ನಿಲ್ಲುವುದಿಲ್ಲ.ಇಂದು ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಸಭೆಯಲ್ಲಿ ಸರ್ಕಾರದ ದಿಕ್ಸೂಚಿ ಬಗ್ಗೆ ಹೇಳಿದ್ದೇನೆ. ಟೀಂ ಆಗಿ ವರ್ಕ್ ಮಾಡಬೇಕು ಎಂದು ಸೂಚಿಸಿದ್ದೇನೆ ಎಂದರು.

ಇದೇ ವೇಳೆ ರೈತರ ಮಕ್ಕಳು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಹೊಸ ಶಿಷ್ಯ ವೇತನ ಜಾರಿಗೆ ತರಲು ₹೧೦೦೦ ಕೋಟಿ ಅನುದಾನ ಮೀಸಲಿಸಿದ್ದು ರೈತರ ಮಕ್ಕಳಿಗೆ ಹೊಸ ಶಿಷ್ಯ ವೇತನ ಜಾರಿ ಮಾಡಲಾಗುವುದು ಎಂದರು.

ಇದರೊಂದಿಗೆ ವಿಧವಾ ವೇತನವನ್ನು 600 ರೂ.ನಿಂದ 800 ರೂ. ಕ್ಕೆ ಹೆಚ್ಚಿಸಲಾಗಿದೆ. ವಿಶೇಷ ಚೇತನರಿಗೆ ವೇತನ 600 ರೂ.ನಿಂದ 800 ರೂ. ಹೆಚ್ಚಳ, ಸಂದ್ಯ ಸುರಕ್ಷಾ ಯೋಜನೆ ಫಲಾನುಭವಿಗಳಿಗೆ 1000 ರೂನಿಂದ 1,200 ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago