ಮುಂಬೈ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಟಾರ್ಚ್ಲೈಟ್ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿಸಿದ್ದು ಇದರಿಂದ ತಾಯಿ-ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಈ ಸಂದರ್ಭದಲ್ಲೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ವೈದ್ಯರ ತಂಡ ಮೊಬೈಲ್ ಫೋನ್ಗಳ ಬೆಳಕಿನಲ್ಲಿ ಸಿ-ಸೆಕ್ಷನ್ ಮಾಡಿದ್ದಾರೆ. ವೈದ್ಯರು ಹೆರಿಗೆ ಮಾಡಿದ ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾಳೆ. ಮಗುವೂ ಸಹ ಮೃತಪಟ್ಟಿದೆ. ಹೆಮರೇಜ್ ಕಾರಣದಿಂದಾಗಿ ಮಹಿಳೆ ಹೆರಿಗೆಯ ನಂತರ ತೀವ್ರವಾದ ಯೋನಿ ರಕ್ತಸ್ರಾವವನ್ನು ಅನುಭವಿಸಿದರು ಎಂದು ತಿಳಿದುಬಂದಿದೆ.
ಮೃತ ಮಹಿಳೆಯನ್ನು ಮುಂಬೈನ ಭಾಂಡೂಪ್ನ ನಿವಾಸಿ ಸಹೀದುನ್ನಿಸ್ಸಾ ಅನ್ಸಾರಿ ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಅಂಗವಿಕಲರಾಗಿದ್ದು, ಹೆರಿಗೆಗೆ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ಸಂದರ್ಭದಲ್ಲಿ ವೈದ್ಯರು ಸಾಮಾನ್ಯ ಹೆರಿಗೆ ಮಾಡುವ ಭರವಸೆ ನೀಡಿದ್ದರು. ಆದರೆ ಸೋಮವಾರ ಶಾಹಿದುನ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ವೈದ್ಯರು ಸಾಮಾನ್ಯ ಹೆರಿಗೆ ಕಷ್ಟ ಎಂದು ಹೇಳಿ ಸಿಸೇರಿಯನ್ ಮಾಡಲು ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯುತ್ ಕಡಿತವಾಗಿತ್ತು. ಆಸ್ಪತ್ರೆಯಲ್ಲಿ ಜನರೇಟರ್ ಇರಲ್ಲಿಲ್ಲ. ಮಾತ್ರವಲ್ಲ ಆಮ್ಲಜನಕದ ವ್ಯವಸ್ಥೆಯೂ ಇರಲ್ಲಿಲ್ಲ ಎನ್ನಲಾಗ್ತಿದೆ. ಮಹಿಳೆಯ ಸಂಬಂಧಿಕರು ಮಂಗಳವಾರ ಮತ್ತು ಬುಧವಾರ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಸಿಲಿಂಡರ್ನಂತಹ ತುರ್ತು ಅಗತ್ಯ ಉಪಕರಣಗಳಿಲ್ಲ ಎಂದು ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. ಮಾತ್ರವಲ್ಲ ತಾಯಿ-ಮಗು ಸಾವು ಆದ ನಂತರ ಅದೇ ಆಪರೇಷನ್ ಥಿಯೇಟರ್ನಲ್ಲಿ ಮೊಬೈಲ್ ಟಾರ್ಚ್ನಲ್ಲಿ ಮತ್ತೊಂದು ಹೆರಿಗೆ ಮಾಡಲಾಯಿತು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.
ಘಟನೆಯ ನಂತರ, ಮುಂಬೈನ ನಾಗರಿಕ ಸಂಸ್ಥೆ, ಕ್ರಮಕ್ಕೆ ಧಾವಿಸಿತು. ಘಟನೆಯ ತನಿಖೆಗಾಗಿ 10 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಸರ್ಕಾರಿ ಆಸ್ಪತ್ರೆಯ ವೈದ್ಯರನ್ನೂ ಒಳಗೊಂಡಿತ್ತು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…