ಮುಂಬೈ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಟಾರ್ಚ್ಲೈಟ್ನಲ್ಲಿ ಮಹಿಳೆಗೆ ಸಿಸೇರಿಯನ್ ಮಾಡಿಸಿದ್ದು ಇದರಿಂದ ತಾಯಿ-ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಈ ಸಂದರ್ಭದಲ್ಲೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ವೈದ್ಯರ ತಂಡ ಮೊಬೈಲ್ ಫೋನ್ಗಳ ಬೆಳಕಿನಲ್ಲಿ ಸಿ-ಸೆಕ್ಷನ್ ಮಾಡಿದ್ದಾರೆ. ವೈದ್ಯರು ಹೆರಿಗೆ ಮಾಡಿದ ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾಳೆ. ಮಗುವೂ ಸಹ ಮೃತಪಟ್ಟಿದೆ. ಹೆಮರೇಜ್ ಕಾರಣದಿಂದಾಗಿ ಮಹಿಳೆ ಹೆರಿಗೆಯ ನಂತರ ತೀವ್ರವಾದ ಯೋನಿ ರಕ್ತಸ್ರಾವವನ್ನು ಅನುಭವಿಸಿದರು ಎಂದು ತಿಳಿದುಬಂದಿದೆ.
ಮೃತ ಮಹಿಳೆಯನ್ನು ಮುಂಬೈನ ಭಾಂಡೂಪ್ನ ನಿವಾಸಿ ಸಹೀದುನ್ನಿಸ್ಸಾ ಅನ್ಸಾರಿ ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಅಂಗವಿಕಲರಾಗಿದ್ದು, ಹೆರಿಗೆಗೆ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ಸಂದರ್ಭದಲ್ಲಿ ವೈದ್ಯರು ಸಾಮಾನ್ಯ ಹೆರಿಗೆ ಮಾಡುವ ಭರವಸೆ ನೀಡಿದ್ದರು. ಆದರೆ ಸೋಮವಾರ ಶಾಹಿದುನ್ಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ವೈದ್ಯರು ಸಾಮಾನ್ಯ ಹೆರಿಗೆ ಕಷ್ಟ ಎಂದು ಹೇಳಿ ಸಿಸೇರಿಯನ್ ಮಾಡಲು ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯುತ್ ಕಡಿತವಾಗಿತ್ತು. ಆಸ್ಪತ್ರೆಯಲ್ಲಿ ಜನರೇಟರ್ ಇರಲ್ಲಿಲ್ಲ. ಮಾತ್ರವಲ್ಲ ಆಮ್ಲಜನಕದ ವ್ಯವಸ್ಥೆಯೂ ಇರಲ್ಲಿಲ್ಲ ಎನ್ನಲಾಗ್ತಿದೆ. ಮಹಿಳೆಯ ಸಂಬಂಧಿಕರು ಮಂಗಳವಾರ ಮತ್ತು ಬುಧವಾರ ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಸಿಲಿಂಡರ್ನಂತಹ ತುರ್ತು ಅಗತ್ಯ ಉಪಕರಣಗಳಿಲ್ಲ ಎಂದು ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ. ಮಾತ್ರವಲ್ಲ ತಾಯಿ-ಮಗು ಸಾವು ಆದ ನಂತರ ಅದೇ ಆಪರೇಷನ್ ಥಿಯೇಟರ್ನಲ್ಲಿ ಮೊಬೈಲ್ ಟಾರ್ಚ್ನಲ್ಲಿ ಮತ್ತೊಂದು ಹೆರಿಗೆ ಮಾಡಲಾಯಿತು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.
ಘಟನೆಯ ನಂತರ, ಮುಂಬೈನ ನಾಗರಿಕ ಸಂಸ್ಥೆ, ಕ್ರಮಕ್ಕೆ ಧಾವಿಸಿತು. ಘಟನೆಯ ತನಿಖೆಗಾಗಿ 10 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಸರ್ಕಾರಿ ಆಸ್ಪತ್ರೆಯ ವೈದ್ಯರನ್ನೂ ಒಳಗೊಂಡಿತ್ತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…