ಉಡುಪಿ

ಮೋಜಿನಾಟದ ಉತ್ಸಾಹದಲ್ಲಿ ಎಚ್ಚರಿಕೆ , ಸಮುದ್ರಕ್ಕೆ ಇಳಿವ ಮುನ್ನ ಯೋಚಿಸಿ..

ಕಾಪು: ಕಾಪು ಬೀಚ್‌ ಪ್ರವಾಸಿಗರಿಗೆ ಸ್ವರ್ಗ. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಇದು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಆದರೆ ಮೋಜಿನಾಟದ ಉತ್ಸಾಹದಲ್ಲಿ ಸ್ಥಳೀಯರು ಮತ್ತು ಲೈಫ್‌ ಗಾರ್ಡ್‌ಗಳು ಎಚ್ಚರಿಕೆ ನೀಡಿದರೂ, ಪ್ರವಾಸಿಗರು ಜಲಸಮಾಧಿಯಾಗುತ್ತಿದ್ದಾರೆ.  10 ವರ್ಷದಲ್ಲಿ 20ಕ್ಕೂ ಅಧಿಕ ಸಾವು ?
ಕಾಪು ಬೀಚ್‌ನಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆದರೂ ಸ್ಥಳೀಯ ಮುಳುಗು ತಜ್ಞರು, ಮೀನುಗಾರರು ಮತ್ತು ಲೈಫ್‌ ಗಾರ್ಡ್‌ ಸದಸ್ಯರ ಸಮಯ ಪ್ರಜ್ಞೆಯಿಂದಾಗಿ ಹೆಚ್ಚಿನ ಸಂಖ್ಯೆಯ ಯುವಕ – ಯುವತಿಯರು ಅಪಾಯ ದಿಂದ ಪಾರಾಗಿದ್ದಾರೆ.

ಅಪಾಯಕಾರಿ ಕಾಪು ಸಮುದ್ರ 
ಇಲ್ಲಿನ ಬೀಚ್‌ ಸುಂದರ, ಆಕರ್ಷಕ. ಆದರೆ ಬಲು ಅಪಾಯಕಾರಿ. ಸಮುದ್ರಕ್ಕಿಳಿದು ಆಟವಾಡಲು ಸುಮಾರು 10 ಮೀ. ಒಳಗೆ ಮಾತ್ರ ಜಾಗ ಪ್ರಶಸ್ತವಾಗಿದೆ. ಅದಕ್ಕೂ ಮುಂದೆ ಹೋದವರಿಗೆ ನೀರು ಕುಡಿಸದೇ ಇರುವುದಿಲ್ಲ.

ನಿರ್ಲಕ್ಷ್ಯದ್ದೇ ಸಮಸ್ಯೆ
ಕಾಪು ಬೀಚ್‌ನಲ್ಲಿ ಎಚ್ಚರಿಕೆ ಫ‌ಲಕಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಲೈಫ್‌ಗಾರ್ಡ್‌, ಹೋಂ ಗಾರ್ಡ್‌, ಕೋಸ್ಟಲ್‌ ಗಾರ್ಡ್‌ ಮತ್ತು ಪೊಲೀಸರ ಭದ್ರತೆಯಿದೆ. ಮುನ್ನೆಚ್ಚರಿಕೆ ನೀಡುವ ಸ್ಥಳೀಯರೂ ಇದ್ದಾರೆ. ಆದರೂ ಅವಘಡಗಳು ಸಂಭವಿಸುತ್ತಲೇ ಇವೆ. ಪ್ರವಾಸಿಗರು ಸಮುದ್ರದ ಬಗ್ಗೆ ನಿರ್ಲಕ್ಷ್ಯ ತಳೆಯುವುದರಿಂದಲೇ ಹೀಗಾಗುತ್ತಿದೆ.

ಬೀಚ್‌ ಸೇಫ್‌ ಅಲ್ಲ  
ಕರಾವಳಿಯ ಬೀಚ್‌ಗಳು ಸ್ನಾನ ಮಾಡುವುದಕ್ಕೆ ಸೇಫ್‌ ಅಲ್ಲ. ಬೀಚ್‌ನಲ್ಲಿ ನೀರಿಗಿಳಿಯುವ ಬಹುತೇಕ ಹೊರಗಿನವರು. ಅವರಿಗೆ ಈಜು ಕೂಡಾ ಬರುವುದಿಲ್ಲ.  ಲೈಫ್‌ಗಾರ್ಡ್‌ಗಳು ನೀಡುವ ಎಚ್ಚರಿಕೆಯ ಮಾತುಗಳನ್ನು ನಿರ್ಲಕ್ಷಿಸುವುದರಿಂದ ಅಪಾಯವನ್ನು ಆಹ್ವಾನಿಸಿ ಕೊಳ್ಳುತ್ತಾರೆ. ಪ್ರವಾಸಿಗರೂ ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯ.
– ಯತೀಶ್‌ ಬೈಕಂಪಾಡಿ,
ಸಿಇಒ, ಬೀಚ್‌ ಟೂರಿಸಂ ಡೆವಲಪ್‌ಮೆಂಟ್‌ ಪ್ರಾಜೆಕ್ಟ್ 

ಎಚ್ಚರಿಕೆ ನಿರ್ಲಕ್ಷ್ಯ ಬೇಡ
ಪ್ರತಿ ಬಾರಿ ಎಚ್ಚರಿಕೆ ಸಂದೇಶ ನೀಡಲಾಗುತ್ತದೆ. ಆದರೆ ಅದನ್ನು ಪ್ರವಾಸಿಗರು ನಿರ್ಲಕ್ಷಿಸುತ್ತಾರೆ. ಮೊನ್ನೆಯ ಪ್ರಕರಣದಲ್ಲೂ ಎಚ್ಚರಿಕೆ ನೀಡಿದಾಗ, ಹೇಗಿರಬೇಕೆಂದು ನಮಗೆ ತಿಳಿದಿದೆ. ನಮ್ಮ ಜೀವದ ಬಗ್ಗೆ ನಮಗೆ ಗೊತ್ತಿಲ್ಲವೇ?, ನಿಮಗೇಕೆ ನಮ್ಮ ಉಸಾಬರಿ ಎಂದು ಎದುರುತ್ತರ ನೀಡಿ ಸಮುದ್ರಕ್ಕೆ ಇಳಿದಿದ್ದೇ ಅಪಾಯಕ್ಕೆ ಆಹ್ವಾನವಾಯಿತು.
 - ಪ್ರಫ‌ುಲ್ಲಾ, ಬೀಚ್‌ ನಿರ್ವಹಣಾ ತಂಡದ ಸದಸ್ಯೆ  

 

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

2 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

14 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

38 minutes ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

47 minutes ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

57 minutes ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

1 hour ago