ನವದೆಹಲಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದ ಮೋಟಾರು ವಾಹನ (ತಿದ್ದುಪಡಿ) ಮಸೂದೆ 2019ಕ್ಕೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ದಂಡ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಭ್ರಷ್ಟಾಚಾರ ತಡೆ ಈ ಮಸೂದೆಯ ಗುರಿ.
ಸೀಟ್ ಬೆಲ್ಟ್, ಹೆಲ್ಮೆಟ್ ಇಲ್ಲ ಅಂದ್ರೆ ಬೀಳತ್ತೆ ₹1,000 ದಂಡ 3 ತಿಂಗಳವರೆಗೆ ಚಾಲನ ಪರವಾನಗಿ ರದ್ದು ಮಾಡುವಂತಹ, ಕುಡಿದು ವಾಹನ ಚಲಾಯಿಸಿದರೆ 6 ತಿಂಗಳ ಜೈಲು ಶಿಕ್ಷೆ ನೀಡುವ ಪ್ರಸ್ತಾವಗಳನ್ನು ತಿದ್ದುಪಡಿ ಮಸೂದೆ ಹೊಂದಿದೆ.
ಮಸೂದೆಗೆ ಲೋಕಸಭೆಯು ಕಳೆದ ವಾರ ಒಪ್ಪಿಗೆ ಕೊಟ್ಟಿತ್ತು. ರಾಜ್ಯಸಭೆಯಲ್ಲಿ ಮಸೂದೆ ಪರ 108 ಮತ್ತು ವಿರುದ್ಧ 13 ಮತಗಳು ಚಲಾವಣೆಯಾದವು.
ತೆರಿಗೆ ಸಂಗ್ರಹದ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಈ ಮಸೂದೆಯು ಕಸಿದುಕೊಳ್ಳುತ್ತದೆ. ಹಾಗಾಗಿ, ಮಸೂದೆಯ ವಿವರವಾದ ಪರಿಶೀಲನೆ ಅಗತ್ಯ. ಹಾಗೆಯೇ, ಮಸೂದೆಯು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧಿಕಾರಗಳನ್ನು ಖಾಸಗಿ ಕಂಪನಿಗಳಿಗೆ ನೀಡುತ್ತದೆ ಎಂದು ವಿರೋಧ ಪಕ್ಷಗಳು ಪ್ರತಿಪಾದಿಸಿದವು. ಆದರೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ಅಂಶಗಳನ್ನು ಅಲ್ಲಗಳೆದರು. ರಾಜ್ಯಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.
ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಹಾಗಾಗಿ ಮಸೂದೆಗೆ ಲೋಕಸಭೆಯಲ್ಲಿ ಮತ್ತೊಮ್ಮೆ ಅನುಮತಿ ಪಡೆದುಕೊಳ್ಳಬೇಕಾಗಿದೆ.
ಪ್ರಸ್ತಾವಿತ ಸಂಚಾರ ನಿಯಮಗಳ ಉಲ್ಲಂಘನೆ ವಿಧಿಸಲಾಗುವ ದಂಡಗಳು
ತುರ್ತು ವಾಹನಗಳಿಗೆ ದಾರಿ ಬಿಡದಿದ್ದರೆ ₹ 10,000, 6 ತಿಂಗಳು ಜೈಲು
ಅತಿ ವೇಗದ ಚಾಲನೆ ₹ 1000- ₹ 2000, 3 ತಿಂಗಳು ಜೈಲು
ವಿಮೆ ಇಲ್ಲದ ಡ್ರೈವಿಂಗ್ ₹ 2000
ಹೆಲ್ಮೆಟ್ ಧರಿಸದೆ ಡ್ರೈವಿಂಗ್ ₹1000
ಬಾಲಪರಾಧಿಗಳ ರಸ್ತೆ ಅಪರಾಧ ಪ್ರಕರಣ ₹ 25,000
ಲೈಸೆನ್ಸ್ ಇಲ್ಲದೆ ಅನಧಿಕೃತ ವಾಹನ ಚಾಲನೆ ₹ 5000
ಕುಡಿದು ವಾಹನ ಚಾಲನೆ ₹ 10,000, 6 ತಿಂಗಳು ಜೈಲು
ಸಿಗ್ನಲ್ ಜಂಪ್, ಚಾಲನೆ ವೇಳೆ ಮೊಬೈಲ್ ಬಳಕೆ, ₹ 5000, 6 -12 ತಿಂಗಳು ಜೈಲು
ಇತ್ಯಾದಿ
ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಮಸೂದೆಗೆ ಕೆಲವು ಬದಲಾವಣೆ ಮಾಡಿ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಅಂಗೀಕಾರ ಆದ ಅದೇ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಗಡ್ಕರಿ ಆರಂಭದಲ್ಲಿ ಪ್ರತಿಪಾದಿಸಿದರು. ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಯಲ್ಲಿ ಕೆಲವು ಮುದ್ರಣ ದೋಷಗಳಿದ್ದವು. ಹಾಗಾಗಿ ಅವುಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಳಿಕ ಹೇಳಿದರು. ಮಸೂದೆಗೆ ಕಾಂಗ್ರೆಸ್ ಬೆಂಬಲ ಕೊಟ್ಟಿತು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…