Featured

ಮೋಟಾರು ವಾಹನ (ತಿದ್ದುಪಡಿ) ಮಸೂದೆ : ಕುಡಿದು ವಾಹನ ಚಲಾಯಿಸಿದರೆ ₹ 10,000 ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ -Vishwanews24

ನವದೆಹಲಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದ ಮೋಟಾರು ವಾಹನ (ತಿದ್ದುಪಡಿ) ಮಸೂದೆ 2019ಕ್ಕೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ದಂಡ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಭ್ರಷ್ಟಾಚಾರ ತಡೆ ಈ ಮಸೂದೆಯ ಗುರಿ.

ಸೀಟ್‌ ಬೆಲ್ಟ್‌, ಹೆಲ್ಮೆಟ್‌ ಇಲ್ಲ ಅಂದ್ರೆ ಬೀಳತ್ತೆ ₹1,000 ದಂಡ 3 ತಿಂಗಳವರೆಗೆ ಚಾಲನ ಪರವಾನಗಿ ರದ್ದು ಮಾಡುವಂತಹ, ಕುಡಿದು ವಾಹನ ಚಲಾಯಿಸಿದರೆ 6 ತಿಂಗಳ ಜೈಲು ಶಿಕ್ಷೆ ನೀಡುವ ಪ್ರಸ್ತಾವಗಳನ್ನು ತಿದ್ದುಪಡಿ ಮಸೂದೆ ಹೊಂದಿದೆ.

ಮಸೂದೆಗೆ ಲೋಕಸಭೆಯು ಕಳೆದ ವಾರ ಒಪ್ಪಿಗೆ ಕೊಟ್ಟಿತ್ತು. ರಾಜ್ಯಸಭೆಯಲ್ಲಿ ಮಸೂದೆ ಪರ 108 ಮತ್ತು ವಿರುದ್ಧ 13 ಮತಗಳು ಚಲಾವಣೆಯಾದವು.

ತೆರಿಗೆ ಸಂಗ್ರಹದ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಈ ಮಸೂದೆಯು ಕಸಿದುಕೊಳ್ಳುತ್ತದೆ. ಹಾಗಾಗಿ, ಮಸೂದೆಯ ವಿವರವಾದ ಪರಿಶೀಲನೆ ಅಗತ್ಯ. ಹಾಗೆಯೇ, ಮಸೂದೆಯು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧಿಕಾರಗಳನ್ನು ಖಾಸಗಿ ಕಂಪನಿಗಳಿಗೆ ನೀಡುತ್ತದೆ ಎಂದು ವಿರೋಧ ಪಕ್ಷಗಳು ಪ್ರತಿಪಾದಿಸಿದವು. ಆದರೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಈ ಅಂಶಗಳನ್ನು ಅಲ್ಲಗಳೆದರು. ರಾಜ್ಯಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಹಾಗಾಗಿ ಮಸೂದೆಗೆ ಲೋಕಸಭೆಯಲ್ಲಿ ಮತ್ತೊಮ್ಮೆ ಅನುಮತಿ ಪಡೆದುಕೊಳ್ಳಬೇಕಾಗಿದೆ.

ಪ್ರಸ್ತಾವಿತ ಸಂಚಾರ ನಿಯಮಗಳ ಉಲ್ಲಂಘನೆ ವಿಧಿಸಲಾಗುವ ದಂಡಗಳು

ತುರ್ತು ವಾಹನಗಳಿಗೆ ದಾರಿ ಬಿಡದಿದ್ದರೆ ₹ 10,000, 6 ತಿಂಗಳು ಜೈಲು

ಅತಿ ವೇಗದ ಚಾಲನೆ ₹ 1000- ₹ 2000, 3 ತಿಂಗಳು ಜೈಲು

ವಿಮೆ ಇಲ್ಲದ ಡ್ರೈವಿಂಗ್ ₹ 2000

ಹೆಲ್ಮೆಟ್ ಧರಿಸದೆ ಡ್ರೈವಿಂಗ್ ₹1000

ಬಾಲಪರಾಧಿಗಳ ರಸ್ತೆ ಅಪರಾಧ ಪ್ರಕರಣ ₹ 25,000

ಲೈಸೆನ್ಸ್ ಇಲ್ಲದೆ ಅನಧಿಕೃತ ವಾಹನ ಚಾಲನೆ ₹ 5000

ಕುಡಿದು ವಾಹನ ಚಾಲನೆ ₹ 10,000, 6 ತಿಂಗಳು ಜೈಲು

ಸಿಗ್ನಲ್‌ ಜಂಪ್‌, ಚಾಲನೆ ವೇಳೆ ಮೊಬೈಲ್‌ ಬಳಕೆ, ₹ 5000, 6 -12 ತಿಂಗಳು ಜೈಲು
ಇತ್ಯಾದಿ

ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಮಸೂದೆಗೆ ಕೆಲವು ಬದಲಾವಣೆ ಮಾಡಿ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಆಕ್ಷೇಪ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಅಂಗೀಕಾರ ಆದ ಅದೇ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಗಡ್ಕರಿ ಆರಂಭದಲ್ಲಿ ಪ್ರತಿಪಾದಿಸಿದರು. ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಯಲ್ಲಿ ಕೆಲವು ಮುದ್ರಣ ದೋಷಗಳಿದ್ದವು. ಹಾಗಾಗಿ ಅವುಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಳಿಕ ಹೇಳಿದರು. ಮಸೂದೆಗೆ ಕಾಂಗ್ರೆಸ್‌ ಬೆಂಬಲ ಕೊಟ್ಟಿತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago