Featured

ಮೋಟಾರು ವಾಹನ (ತಿದ್ದುಪಡಿ) ಮಸೂದೆ : ಕುಡಿದು ವಾಹನ ಚಲಾಯಿಸಿದರೆ ₹ 10,000 ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ -Vishwanews24

ನವದೆಹಲಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದ ಮೋಟಾರು ವಾಹನ (ತಿದ್ದುಪಡಿ) ಮಸೂದೆ 2019ಕ್ಕೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ದಂಡ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಭ್ರಷ್ಟಾಚಾರ ತಡೆ ಈ ಮಸೂದೆಯ ಗುರಿ.

ಸೀಟ್‌ ಬೆಲ್ಟ್‌, ಹೆಲ್ಮೆಟ್‌ ಇಲ್ಲ ಅಂದ್ರೆ ಬೀಳತ್ತೆ ₹1,000 ದಂಡ 3 ತಿಂಗಳವರೆಗೆ ಚಾಲನ ಪರವಾನಗಿ ರದ್ದು ಮಾಡುವಂತಹ, ಕುಡಿದು ವಾಹನ ಚಲಾಯಿಸಿದರೆ 6 ತಿಂಗಳ ಜೈಲು ಶಿಕ್ಷೆ ನೀಡುವ ಪ್ರಸ್ತಾವಗಳನ್ನು ತಿದ್ದುಪಡಿ ಮಸೂದೆ ಹೊಂದಿದೆ.

ಮಸೂದೆಗೆ ಲೋಕಸಭೆಯು ಕಳೆದ ವಾರ ಒಪ್ಪಿಗೆ ಕೊಟ್ಟಿತ್ತು. ರಾಜ್ಯಸಭೆಯಲ್ಲಿ ಮಸೂದೆ ಪರ 108 ಮತ್ತು ವಿರುದ್ಧ 13 ಮತಗಳು ಚಲಾವಣೆಯಾದವು.

ತೆರಿಗೆ ಸಂಗ್ರಹದ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಈ ಮಸೂದೆಯು ಕಸಿದುಕೊಳ್ಳುತ್ತದೆ. ಹಾಗಾಗಿ, ಮಸೂದೆಯ ವಿವರವಾದ ಪರಿಶೀಲನೆ ಅಗತ್ಯ. ಹಾಗೆಯೇ, ಮಸೂದೆಯು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧಿಕಾರಗಳನ್ನು ಖಾಸಗಿ ಕಂಪನಿಗಳಿಗೆ ನೀಡುತ್ತದೆ ಎಂದು ವಿರೋಧ ಪಕ್ಷಗಳು ಪ್ರತಿಪಾದಿಸಿದವು. ಆದರೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಈ ಅಂಶಗಳನ್ನು ಅಲ್ಲಗಳೆದರು. ರಾಜ್ಯಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಮಸೂದೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ. ಹಾಗಾಗಿ ಮಸೂದೆಗೆ ಲೋಕಸಭೆಯಲ್ಲಿ ಮತ್ತೊಮ್ಮೆ ಅನುಮತಿ ಪಡೆದುಕೊಳ್ಳಬೇಕಾಗಿದೆ.

ಪ್ರಸ್ತಾವಿತ ಸಂಚಾರ ನಿಯಮಗಳ ಉಲ್ಲಂಘನೆ ವಿಧಿಸಲಾಗುವ ದಂಡಗಳು

ತುರ್ತು ವಾಹನಗಳಿಗೆ ದಾರಿ ಬಿಡದಿದ್ದರೆ ₹ 10,000, 6 ತಿಂಗಳು ಜೈಲು

ಅತಿ ವೇಗದ ಚಾಲನೆ ₹ 1000- ₹ 2000, 3 ತಿಂಗಳು ಜೈಲು

ವಿಮೆ ಇಲ್ಲದ ಡ್ರೈವಿಂಗ್ ₹ 2000

ಹೆಲ್ಮೆಟ್ ಧರಿಸದೆ ಡ್ರೈವಿಂಗ್ ₹1000

ಬಾಲಪರಾಧಿಗಳ ರಸ್ತೆ ಅಪರಾಧ ಪ್ರಕರಣ ₹ 25,000

ಲೈಸೆನ್ಸ್ ಇಲ್ಲದೆ ಅನಧಿಕೃತ ವಾಹನ ಚಾಲನೆ ₹ 5000

ಕುಡಿದು ವಾಹನ ಚಾಲನೆ ₹ 10,000, 6 ತಿಂಗಳು ಜೈಲು

ಸಿಗ್ನಲ್‌ ಜಂಪ್‌, ಚಾಲನೆ ವೇಳೆ ಮೊಬೈಲ್‌ ಬಳಕೆ, ₹ 5000, 6 -12 ತಿಂಗಳು ಜೈಲು
ಇತ್ಯಾದಿ

ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಮಸೂದೆಗೆ ಕೆಲವು ಬದಲಾವಣೆ ಮಾಡಿ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಆಕ್ಷೇಪ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಅಂಗೀಕಾರ ಆದ ಅದೇ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ ಎಂದು ಗಡ್ಕರಿ ಆರಂಭದಲ್ಲಿ ಪ್ರತಿಪಾದಿಸಿದರು. ಲೋಕಸಭೆಯಲ್ಲಿ ಮಂಡಿಸಲಾದ ಮಸೂದೆಯಲ್ಲಿ ಕೆಲವು ಮುದ್ರಣ ದೋಷಗಳಿದ್ದವು. ಹಾಗಾಗಿ ಅವುಗಳಿಗೆ ತಿದ್ದುಪಡಿ ಮಾಡಲಾಗಿದೆ ಎಂದು ಬಳಿಕ ಹೇಳಿದರು. ಮಸೂದೆಗೆ ಕಾಂಗ್ರೆಸ್‌ ಬೆಂಬಲ ಕೊಟ್ಟಿತು.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

58 minutes ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

2 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

3 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago