Featured

ಮೋದಿಯನ್ನು ಸೋಲಿಸಿದರೆ ಅದು ಮೂರ್ಖತನ: ಸಾಹಿತಿ ಎಸ್.‌ಎಲ್. ಭೈರಪ್ಪ

ಮೈಸೂರು: ಕಳೆದ ನಾಲ್ಕು ವರ್ಷದಲ್ಲಿ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಅಭಿವೃದ್ಧಿ ‌ಮಾಡಿದ್ದಾರೆ. ಮುಂದಿನ ಭವಿಷ್ಯದ ಭಾರತವನ್ನು ಕಟ್ಟಲು ಶ್ರಮಿಸುತ್ತಿದ್ದಾರೆ ಎಂದು ಸಾಹಿತಿ ಎಸ್.‌ಎಲ್. ಭೈರಪ್ಪ ಹೇಳಿದ್ದಾರೆ.

ಆವರು  ಮೈಸೂರಿನ ಕುವೆಂಪುನಗರದ ತಮ್ಮ ನಿವಾಸದಲ್ಲಿ ಸಂಸದ ಪ್ರತಾಪ್‌ಸಿಂಹ ಅವರಿಂದ ಕೇಂದ್ರ ಸರಕಾರ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಗಳ ಪುಸ್ತಕ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಸದ ಪ್ರತಾಪ್‌ ಸಿಂಹ ಭೇಟಿ ವೇಳೆ ಮಾತನಾಡಿ, ಮೋದಿ ಒಂದು ಬಾರಿಯಲ್ಲ, ಮೂರು ಬಾರಿ ಗೆದ್ದರೆ ಮಾತ್ರ ಭಾರತಕ್ಕೆ ಉಳಿಗಾಲ. ಎರಡು ಮೂ‌ರು ಬಣಗಳು ಸೇರಿಕೊಂಡು ಮೋದಿ ಸೋಲಿಸಲು ಪಣ ತೊಟ್ಟಿವೆ. ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನದ ಪರಮಾವಧಿ. ನಮ್ಮ‌ ಶತೃ ರಾಷ್ಟ್ರಗಳಾಗಿರುವ ನೆರೆಯ ಚೀನಾ‌ ಮತ್ತು ಪಾಕಿಸ್ತಾನ ಸುತ್ತಲಿನ ರಾಷ್ಟ್ರಗಳ ಪ್ರೀತಿ ವಿಶ್ವಾಸಗಳಿಸುವಲ್ಲೂ ಮೋದಿ ಯಶಸ್ವಿಯಾಗಿದ್ದಾರೆ ಎಂದರು. 

2023ರ ತನಕ ಮೋದಿ ಗೆಲ್ಲಬೇಕು, ಜನರು ಎಚ್ಚೆತ್ತುಕೊಳ್ಳಬೇಕು, ಮೋದಿಯನ್ನು ಸೋಲಿಸಬೇಕು ಅಂತ ಕೆಲವು ನಿರ್ಧಾರ ಮಾಡಿದ್ದಾರೆ.

ಈಗ ತಾನೇ ಮೋದಿ ಸರ್ಕಾರ ಟೇಕ್ ಆಫ್ ಆಗಿದೆ. ಅವರ ಕೆಲಸಗಳು ಸಾಕಷ್ಟು ಜನಪ್ರಿಯಗೊಳ್ಳುತ್ತಿವೆ ಅಂತ ಹೇಳಿದರು. ಭಾರತವನ್ನು ಉತ್ತಮವಾಗಿ ಅಭಿವೃದ್ಧಿ ಮಾಡಿದ್ದಾರೆ. ಭವಿಷ್ಯದಲ್ಲಿಯೂ ಇದೇ ರೀತಿ ಶ್ರಮಿಸಲಿದ್ದಾರೆ. ಹೀಗಿರುವಾಗ ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನ ಪರಮಾವಧಿ ಎಂದರು.

ಮೋದಿ ಕೆಲಸವನ್ನು ಪ್ರೀತಿಸಿ :ಹಿಂದೆ ಇದ್ದ ಯುಪಿಎ ಸರ್ಕಾರದಲ್ಲಿ ಏನು ಸಾಧನೆ‌ ಮಾಡಿತ್ತು? ಯಾವುದೇ ಒಂದು ಕೆಲಸ ಮಾಡಬೇಕಾದರೂ ಮೇಡಂ ಅಂತ ಅವರ ಹಿಂದೆ‌ ಹೋಗುತ್ತಿದ್ದರು. ನಿಮಗೆ ಇಂತಹವರು ಬೇಕಾ? ದೇಶದ ಅಭಿವೃದ್ಧಿ ಮಾಡುವವರು ಬೇಕಾ? ಮೋದಿಯನ್ನು ದ್ವೇಷ ಮಾಡುವ ಬದಲು ಅವರ ಕೆಲಸವನ್ನು ಪ್ರೀತಿಸಿ ಎಂದು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago