Featured

ಮೋದಿಯನ್ನು ಸೋಲಿಸಿದರೆ ಅದು ಮೂರ್ಖತನ: ಸಾಹಿತಿ ಎಸ್.‌ಎಲ್. ಭೈರಪ್ಪ

ಮೈಸೂರು: ಕಳೆದ ನಾಲ್ಕು ವರ್ಷದಲ್ಲಿ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಅಭಿವೃದ್ಧಿ ‌ಮಾಡಿದ್ದಾರೆ. ಮುಂದಿನ ಭವಿಷ್ಯದ ಭಾರತವನ್ನು ಕಟ್ಟಲು ಶ್ರಮಿಸುತ್ತಿದ್ದಾರೆ ಎಂದು ಸಾಹಿತಿ ಎಸ್.‌ಎಲ್. ಭೈರಪ್ಪ ಹೇಳಿದ್ದಾರೆ.

ಆವರು  ಮೈಸೂರಿನ ಕುವೆಂಪುನಗರದ ತಮ್ಮ ನಿವಾಸದಲ್ಲಿ ಸಂಸದ ಪ್ರತಾಪ್‌ಸಿಂಹ ಅವರಿಂದ ಕೇಂದ್ರ ಸರಕಾರ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಗಳ ಪುಸ್ತಕ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಸದ ಪ್ರತಾಪ್‌ ಸಿಂಹ ಭೇಟಿ ವೇಳೆ ಮಾತನಾಡಿ, ಮೋದಿ ಒಂದು ಬಾರಿಯಲ್ಲ, ಮೂರು ಬಾರಿ ಗೆದ್ದರೆ ಮಾತ್ರ ಭಾರತಕ್ಕೆ ಉಳಿಗಾಲ. ಎರಡು ಮೂ‌ರು ಬಣಗಳು ಸೇರಿಕೊಂಡು ಮೋದಿ ಸೋಲಿಸಲು ಪಣ ತೊಟ್ಟಿವೆ. ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನದ ಪರಮಾವಧಿ. ನಮ್ಮ‌ ಶತೃ ರಾಷ್ಟ್ರಗಳಾಗಿರುವ ನೆರೆಯ ಚೀನಾ‌ ಮತ್ತು ಪಾಕಿಸ್ತಾನ ಸುತ್ತಲಿನ ರಾಷ್ಟ್ರಗಳ ಪ್ರೀತಿ ವಿಶ್ವಾಸಗಳಿಸುವಲ್ಲೂ ಮೋದಿ ಯಶಸ್ವಿಯಾಗಿದ್ದಾರೆ ಎಂದರು. 

2023ರ ತನಕ ಮೋದಿ ಗೆಲ್ಲಬೇಕು, ಜನರು ಎಚ್ಚೆತ್ತುಕೊಳ್ಳಬೇಕು, ಮೋದಿಯನ್ನು ಸೋಲಿಸಬೇಕು ಅಂತ ಕೆಲವು ನಿರ್ಧಾರ ಮಾಡಿದ್ದಾರೆ.

ಈಗ ತಾನೇ ಮೋದಿ ಸರ್ಕಾರ ಟೇಕ್ ಆಫ್ ಆಗಿದೆ. ಅವರ ಕೆಲಸಗಳು ಸಾಕಷ್ಟು ಜನಪ್ರಿಯಗೊಳ್ಳುತ್ತಿವೆ ಅಂತ ಹೇಳಿದರು. ಭಾರತವನ್ನು ಉತ್ತಮವಾಗಿ ಅಭಿವೃದ್ಧಿ ಮಾಡಿದ್ದಾರೆ. ಭವಿಷ್ಯದಲ್ಲಿಯೂ ಇದೇ ರೀತಿ ಶ್ರಮಿಸಲಿದ್ದಾರೆ. ಹೀಗಿರುವಾಗ ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನ ಪರಮಾವಧಿ ಎಂದರು.

ಮೋದಿ ಕೆಲಸವನ್ನು ಪ್ರೀತಿಸಿ :ಹಿಂದೆ ಇದ್ದ ಯುಪಿಎ ಸರ್ಕಾರದಲ್ಲಿ ಏನು ಸಾಧನೆ‌ ಮಾಡಿತ್ತು? ಯಾವುದೇ ಒಂದು ಕೆಲಸ ಮಾಡಬೇಕಾದರೂ ಮೇಡಂ ಅಂತ ಅವರ ಹಿಂದೆ‌ ಹೋಗುತ್ತಿದ್ದರು. ನಿಮಗೆ ಇಂತಹವರು ಬೇಕಾ? ದೇಶದ ಅಭಿವೃದ್ಧಿ ಮಾಡುವವರು ಬೇಕಾ? ಮೋದಿಯನ್ನು ದ್ವೇಷ ಮಾಡುವ ಬದಲು ಅವರ ಕೆಲಸವನ್ನು ಪ್ರೀತಿಸಿ ಎಂದು ಹೇಳಿದ್ದಾರೆ.

 

Vishwa News 24

Recent Posts

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ -vishwanews24

ಭಾರೀ ಮಳೆ ಹಿನ್ನೆಲೆ : ಜು.25 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ಮಂಗಳೂರು: ಕರಾವಳಿ ಜಿಲ್ಲೆ…

9 hours ago

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ನಿರಂತರ ಮಳೆ ಹಿನ್ನೆಲೆ : ಜು.25ರಂದು (ನಾಳೆ)ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ…

9 hours ago

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

14 hours ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

14 hours ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

14 hours ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

14 hours ago