ಮೈಸೂರು: ಕಳೆದ ನಾಲ್ಕು ವರ್ಷದಲ್ಲಿ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಮುಂದಿನ ಭವಿಷ್ಯದ ಭಾರತವನ್ನು ಕಟ್ಟಲು ಶ್ರಮಿಸುತ್ತಿದ್ದಾರೆ ಎಂದು ಸಾಹಿತಿ ಎಸ್.ಎಲ್. ಭೈರಪ್ಪ ಹೇಳಿದ್ದಾರೆ.
ಆವರು ಮೈಸೂರಿನ ಕುವೆಂಪುನಗರದ ತಮ್ಮ ನಿವಾಸದಲ್ಲಿ ಸಂಸದ ಪ್ರತಾಪ್ಸಿಂಹ ಅವರಿಂದ ಕೇಂದ್ರ ಸರಕಾರ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಗಳ ಪುಸ್ತಕ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಂಸದ ಪ್ರತಾಪ್ ಸಿಂಹ ಭೇಟಿ ವೇಳೆ ಮಾತನಾಡಿ, ಮೋದಿ ಒಂದು ಬಾರಿಯಲ್ಲ, ಮೂರು ಬಾರಿ ಗೆದ್ದರೆ ಮಾತ್ರ ಭಾರತಕ್ಕೆ ಉಳಿಗಾಲ. ಎರಡು ಮೂರು ಬಣಗಳು ಸೇರಿಕೊಂಡು ಮೋದಿ ಸೋಲಿಸಲು ಪಣ ತೊಟ್ಟಿವೆ. ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನದ ಪರಮಾವಧಿ. ನಮ್ಮ ಶತೃ ರಾಷ್ಟ್ರಗಳಾಗಿರುವ ನೆರೆಯ ಚೀನಾ ಮತ್ತು ಪಾಕಿಸ್ತಾನ ಸುತ್ತಲಿನ ರಾಷ್ಟ್ರಗಳ ಪ್ರೀತಿ ವಿಶ್ವಾಸಗಳಿಸುವಲ್ಲೂ ಮೋದಿ ಯಶಸ್ವಿಯಾಗಿದ್ದಾರೆ ಎಂದರು.
2023ರ ತನಕ ಮೋದಿ ಗೆಲ್ಲಬೇಕು, ಜನರು ಎಚ್ಚೆತ್ತುಕೊಳ್ಳಬೇಕು, ಮೋದಿಯನ್ನು ಸೋಲಿಸಬೇಕು ಅಂತ ಕೆಲವು ನಿರ್ಧಾರ ಮಾಡಿದ್ದಾರೆ.
ಈಗ ತಾನೇ ಮೋದಿ ಸರ್ಕಾರ ಟೇಕ್ ಆಫ್ ಆಗಿದೆ. ಅವರ ಕೆಲಸಗಳು ಸಾಕಷ್ಟು ಜನಪ್ರಿಯಗೊಳ್ಳುತ್ತಿವೆ ಅಂತ ಹೇಳಿದರು. ಭಾರತವನ್ನು ಉತ್ತಮವಾಗಿ ಅಭಿವೃದ್ಧಿ ಮಾಡಿದ್ದಾರೆ. ಭವಿಷ್ಯದಲ್ಲಿಯೂ ಇದೇ ರೀತಿ ಶ್ರಮಿಸಲಿದ್ದಾರೆ. ಹೀಗಿರುವಾಗ ಮೋದಿಯನ್ನು ಸೋಲಿಸಿದರೆ ಅದು ನಮ್ಮ ಮೂರ್ಖತನ ಪರಮಾವಧಿ ಎಂದರು.
ಮೋದಿ ಕೆಲಸವನ್ನು ಪ್ರೀತಿಸಿ :ಹಿಂದೆ ಇದ್ದ ಯುಪಿಎ ಸರ್ಕಾರದಲ್ಲಿ ಏನು ಸಾಧನೆ ಮಾಡಿತ್ತು? ಯಾವುದೇ ಒಂದು ಕೆಲಸ ಮಾಡಬೇಕಾದರೂ ಮೇಡಂ ಅಂತ ಅವರ ಹಿಂದೆ ಹೋಗುತ್ತಿದ್ದರು. ನಿಮಗೆ ಇಂತಹವರು ಬೇಕಾ? ದೇಶದ ಅಭಿವೃದ್ಧಿ ಮಾಡುವವರು ಬೇಕಾ? ಮೋದಿಯನ್ನು ದ್ವೇಷ ಮಾಡುವ ಬದಲು ಅವರ ಕೆಲಸವನ್ನು ಪ್ರೀತಿಸಿ ಎಂದು ಹೇಳಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…