ಮಂಗಳೂರು, :ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ರ್ಯಾಲಿಗೆ ಭರ್ಜರಿ ಸಿದ್ಧತೆ ನಡೆದಿದೆ. ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಸಂಜೆ 4 ಗಂಟೆಗೆ ಮೈದಾನ ತಲುಪಲಿದ್ದಾರೆ.
ಈ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಘಟಕ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಜೊತೆಗೆ ರಾಜ್ಯದ ಹಲವು ಪ್ರಬಲ ನಾಯಕರು ಸೇರಿಕೊಳ್ಳಲಿದ್ದಾರೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಬಿಜೆಪಿ ಘಟಕ ಮೈ ಭೀ ಚೌಕೀದಾರ್ ಅಭಿಯಾನ ನಡೆಸಲು ನಿರ್ಧರಿಸಿದ್ದು, ಇಂದು ಪ್ರಧಾನಿ ಮೋದಿಯೆದುರು ಈ ಅಭಿಯಾನವನ್ನು ವಿಶೇಷ ರೀತಿಯಲ್ಲಿ ಅನಾವರಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.
ಕಡಲ ನಗರಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರೂ ಸೇರಿದಂತೆ ಸಾವಿರಕ್ಕೂ ಬಿಜೆಪಿ ಕಾರ್ಯಕರ್ತರು ಇಂದು ಮೈ ಭೀ ಚೌಕೀದಾರ್ ಎನ್ನುವ ಹೆಸರು ಪಟ್ಟಿಯೊಂದಿಗೆ ಕಾವಲುಗಾರನ ಸಮವಸ್ತ್ರದಲ್ಲಿ ಮಿಂಚಲಿದ್ದಾರೆ.
ಈಗಾಗಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಚೌಕೀದಾರ್ ಸಮವಸ್ತ್ರದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಭಾರೀ ವೈರಲ್ ಆಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…