ಮಂಗಳೂರು, :ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವ ಬೃಹತ್ ರ್ಯಾಲಿಗೆ ಭರ್ಜರಿ ಸಿದ್ಧತೆ ನಡೆದಿದೆ. ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಸಂಜೆ 4 ಗಂಟೆಗೆ ಮೈದಾನ ತಲುಪಲಿದ್ದಾರೆ.
ಈ ನಿಟ್ಟಿನಲ್ಲಿ ಬಿಜೆಪಿ ಜಿಲ್ಲಾ ಘಟಕ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಜೊತೆಗೆ ರಾಜ್ಯದ ಹಲವು ಪ್ರಬಲ ನಾಯಕರು ಸೇರಿಕೊಳ್ಳಲಿದ್ದಾರೆ.
ಮೋದಿ ಆಗಮನದ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಬಿಜೆಪಿ ಘಟಕ ಮೈ ಭೀ ಚೌಕೀದಾರ್ ಅಭಿಯಾನ ನಡೆಸಲು ನಿರ್ಧರಿಸಿದ್ದು, ಇಂದು ಪ್ರಧಾನಿ ಮೋದಿಯೆದುರು ಈ ಅಭಿಯಾನವನ್ನು ವಿಶೇಷ ರೀತಿಯಲ್ಲಿ ಅನಾವರಣಗೊಳಿಸಲು ಸಿದ್ಧತೆ ನಡೆಸಿದ್ದಾರೆ.
ಕಡಲ ನಗರಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರೂ ಸೇರಿದಂತೆ ಸಾವಿರಕ್ಕೂ ಬಿಜೆಪಿ ಕಾರ್ಯಕರ್ತರು ಇಂದು ಮೈ ಭೀ ಚೌಕೀದಾರ್ ಎನ್ನುವ ಹೆಸರು ಪಟ್ಟಿಯೊಂದಿಗೆ ಕಾವಲುಗಾರನ ಸಮವಸ್ತ್ರದಲ್ಲಿ ಮಿಂಚಲಿದ್ದಾರೆ.
ಈಗಾಗಲೇ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಚೌಕೀದಾರ್ ಸಮವಸ್ತ್ರದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಭಾರೀ ವೈರಲ್ ಆಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…