Featured

ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ , ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ :ದಿನೇಶ್ ಗುಂಡೂರಾವ್ -Vishwanews24

ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ , ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ :ದಿನೇಶ್ ಗುಂಡೂರಾವ್ -Vishwanews24

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬಳಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಚೇಳಿಗೆ ಯಜಮಾನಿಕೆ ನೀಡಿ ಮನೆಯವರೆಲ್ಲಾ ಕುಟುಕಿಸಿಕೊಳ್ಳುವಂತಾಗಿದೆ ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ. ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ವಾಗಿದ್ದಾರೆ. ಮೋದಿಯವರ ಅಚ್ಚೇದಿನ್‍ನ ಸತ್ಯ ಜನರಿಗೆ ಈಗ ಅರಿವಾಗುತ್ತಿದೆ. ಬೆಲೆಯೇರಿಸಿ ಜನರ ಜೇಬು ಖಾಲಿ ಮಾಡುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಿದ್ದಂತೆ ಭಾಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24

ಒಂದೇ ತಿಂಗಳ ಅವಧಿಯಲ್ಲಿ 4 ಬಾರಿ ಎಲ್‍ಪಿಜಿ ಬೆಲೆಯೇರಿಕೆಯಾಗಿದೆ. ಒಂದೊಂದು ರೂಪಾಯಿಗೂ ಪರಿತಪಿಸುತ್ತಿರುವ ಬಡಜನತೆ ಈ ಬೆಲೆಯೇರಿಕೆ ತಾಪ ಸಹಿಸಿಕೊಳ್ಳಲು ಹೇಗೆ ಸಾಧ್ಯ? ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತಾದರೂ ಸಂವೇದನೆ ಬೇಡವೆ ಎಂದು ಪ್ರಶ್ನಿಸಿದ್ದಾರೆ.

ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ. ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ಕೊವೀಡ್ ಲಸಿಕೆ ಪಡೆದುಕೊಂಡ ಕೃಷಿ ಸಚಿವ ಬಿ.ಸಿ ಪಾಟೀಲ್ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago