ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬಳಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ ಎಂದು ವ್ಯಂಗ್ಯ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಚೇಳಿಗೆ ಯಜಮಾನಿಕೆ ನೀಡಿ ಮನೆಯವರೆಲ್ಲಾ ಕುಟುಕಿಸಿಕೊಳ್ಳುವಂತಾಗಿದೆ ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ. ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ವಾಗಿದ್ದಾರೆ. ಮೋದಿಯವರ ಅಚ್ಚೇದಿನ್ನ ಸತ್ಯ ಜನರಿಗೆ ಈಗ ಅರಿವಾಗುತ್ತಿದೆ. ಬೆಲೆಯೇರಿಸಿ ಜನರ ಜೇಬು ಖಾಲಿ ಮಾಡುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಿದ್ದಂತೆ ಭಾಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24
ಒಂದೇ ತಿಂಗಳ ಅವಧಿಯಲ್ಲಿ 4 ಬಾರಿ ಎಲ್ಪಿಜಿ ಬೆಲೆಯೇರಿಕೆಯಾಗಿದೆ. ಒಂದೊಂದು ರೂಪಾಯಿಗೂ ಪರಿತಪಿಸುತ್ತಿರುವ ಬಡಜನತೆ ಈ ಬೆಲೆಯೇರಿಕೆ ತಾಪ ಸಹಿಸಿಕೊಳ್ಳಲು ಹೇಗೆ ಸಾಧ್ಯ? ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತಾದರೂ ಸಂವೇದನೆ ಬೇಡವೆ ಎಂದು ಪ್ರಶ್ನಿಸಿದ್ದಾರೆ.
ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ. ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…