Featured

ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ , ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ :ದಿನೇಶ್ ಗುಂಡೂರಾವ್ -Vishwanews24

ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ , ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ :ದಿನೇಶ್ ಗುಂಡೂರಾವ್ -Vishwanews24

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬಳಕೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್, ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ ಎಂದು ವ್ಯಂಗ್ಯ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಚೇಳಿಗೆ ಯಜಮಾನಿಕೆ ನೀಡಿ ಮನೆಯವರೆಲ್ಲಾ ಕುಟುಕಿಸಿಕೊಳ್ಳುವಂತಾಗಿದೆ ಪ್ರಧಾನಿ ಮೋದಿಯವರ ಆಡಳಿತ. ಇದೊಂದು ರೀತಿ ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡಂತೆ. ಸ್ವಘೋಷಿತ ‘ಚೌಕಿದಾರ’ ಮೋದಿಯವರು ನಿಜವಾದ ‘ಚೌಕಿದಾರ’ರಲ್ಲ. ಬದಲಿಗೆ ಜನಸಾಮಾನ್ಯರ ಪಾಲಿನ ‘ಕೆಟ್ಟ ಗ್ರಹಚಾರ’ವಾಗಿದ್ದಾರೆ. ಮೋದಿಯವರ ಅಚ್ಚೇದಿನ್‍ನ ಸತ್ಯ ಜನರಿಗೆ ಈಗ ಅರಿವಾಗುತ್ತಿದೆ. ಬೆಲೆಯೇರಿಸಿ ಜನರ ಜೇಬು ಖಾಲಿ ಮಾಡುವುದೇ ಕೇಂದ್ರ ಸರ್ಕಾರದ ಒಂದಂಶದ ಕಾರ್ಯಕ್ರಮವಿದ್ದಂತೆ ಭಾಸವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸಂಸದ ನಂದ್ ಕುಮಾರ್ ಸಿಂಗ್ ಚೌಹಾಣ್ ನಿಧನ -Vishwanews24

ಒಂದೇ ತಿಂಗಳ ಅವಧಿಯಲ್ಲಿ 4 ಬಾರಿ ಎಲ್‍ಪಿಜಿ ಬೆಲೆಯೇರಿಕೆಯಾಗಿದೆ. ಒಂದೊಂದು ರೂಪಾಯಿಗೂ ಪರಿತಪಿಸುತ್ತಿರುವ ಬಡಜನತೆ ಈ ಬೆಲೆಯೇರಿಕೆ ತಾಪ ಸಹಿಸಿಕೊಳ್ಳಲು ಹೇಗೆ ಸಾಧ್ಯ? ಈ ಸರ್ಕಾರಕ್ಕೆ ಜನರ ಬಗ್ಗೆ ಕಿಂಚಿತ್ತಾದರೂ ಸಂವೇದನೆ ಬೇಡವೆ ಎಂದು ಪ್ರಶ್ನಿಸಿದ್ದಾರೆ.

ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ಬೆಲೆಯೇರಿಕೆಯಿಂದ ದುಡಿದ ಹಣ ಉಳಿಸುವುದಿರಲಿ,ತಿಂಗಳ ಸಂಸಾರ ನಡೆಸುವುದೂ ಕಷ್ಟವಾಗಿದೆ. ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ.

ಕೊವೀಡ್ ಲಸಿಕೆ ಪಡೆದುಕೊಂಡ ಕೃಷಿ ಸಚಿವ ಬಿ.ಸಿ ಪಾಟೀಲ್ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

6 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

8 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

8 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

9 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

9 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

9 hours ago