Featured

ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ : ಕುವೈತ್ ನಲ್ಲಿ ಅಣ್ಣಮಲೈ -Vishwanews24

ಕುವೈತ್: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ  ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ, ಜಾಗತಿಕ ಮಟ್ಟದಲ್ಲಿ ಭಾರತ ಗುರುತಿಸಿಕೊಳ್ಳುವಂತೆ ಆಗಿದೆ ಎಂದು ಕರ್ನಾಟಕದ ಸಿಂಘಂ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ಹೇಳಿದ್ದಾರೆ.

ಅವರು, ಕುವೈತ್ ನ, ಅಮೆರಿಕ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಭಾರತೀಯ ಪ್ರವಾಸಿ ಪರಿಷತ್ ಆಯೋಜಿಸಿದ್ದ ”ಕರುನಾಡ ಡಿಂಡಿಮಾ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಜಾಗತಿಕ ಮಟ್ಟದಲ್ಲಿ ವಿದೇಶಿ ರಾಷ್ಟ್ರಗಳ ಜೊತೆ ಉತ್ತಮ ಬಾಂಧವ್ಯ ಬೆಸೆಯುವ ಕಾರ್ಯ ಆಗುತ್ತಿದ್ದು ವಿಶ್ವದಾದ್ಯಂತ ಭಾರತವನ್ನು ಗುರುತಿಸಿಕೊಳ್ಳುವಂತೆ ಆಗಿದೆ. ಮೋದಿಯವರ ನೇತೃತ್ವದಲ್ಲಿ ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ. ಹೀಗಾಗಿ ಈ ಒಂದು ರಾಷ್ಟ್ರಕ್ಕೆ ಈ ರೀತಿಯ ಆಡಳಿತ ಮುಖ್ಯ, ಈ ರೀತಿ ಬೆಳವಣಿಗೆ ನಡೆದಾಗ ಹಲವಾರು ಟೀಕೆ, ಅಡೆ ತಡೆಗಳು ಬರುತ್ತಿದ್ದು, ಅಂತಹ ಸಂಗತಿಗಳು ಅಶೋಕ, ಮೌರ್ಯ, ಬಾಬರ್ ಮತ್ತು ಅಕ್ಬರ್ ಭಾರತದಲ್ಲಿ ಆಳ್ವಿಕೆ ನಡೆಸಿದಾಗ ಗಮನಿಸಬಹುವುದು. ಮೊದಲು ಜನಸೇವಕರಾಗಿದ್ದ ಮೋದಿ ಇಂದು ದೇಶದ ಪ್ರಧಾನಿಯಾಗಿದ್ದು, ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ, ಈ ಮೂಲಕ ಸಕರಾತ್ಮಕ ಬದಲಾವಣೆಯತ್ತ ಭಾರತ ಸಾಗುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದಾರೆ.

ಕರ್ನಾಟಕದಲ್ಲಿ ಜನಿಸದಿದ್ದರೂ ಕನ್ನಡಿಗರು ನನಗೆ ನೀಡುವ ಪ್ರೀತಿ ಅಭಿಮಾನ ಗೌರವಕ್ಕೆ ನಾನು ಚಿರಋಣಿ. ಹಾಗಾಗಿ ಎಲ್ಲೇ ಇದ್ದರೂ ಕನ್ನಡಿಗರು ತಮ್ಮ ತಾಯ್ನಾಡಿನ ಬಗ್ಗೆ ಹೆಮ್ಮೆ ಪಡಬೇಕೆಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ಕೇಂದ್ರಬಿಂದುವಾಗಿದ್ದು, ಅಲ್ಲಿನ ಜನ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಅವರನ್ನು ಸನ್ಮಾನಿಸುವಾಗ ಎದ್ದು ನಿಂತು ಗೌರವಿಸಿದರು. ಕಾರ್ಯಕ್ರಮದಲ್ಲಿ ವಕೀಲ ಸುಮೋದ್, ಸತೀಶ್ಚಂದ್ರ ಶೆಟ್ಟಿ, ಫ್ರಾ.ಡೊಮಿನಿಕ್ ಸಿಕ್ವೆರಾ, ರಣವೀರ್ ಭಾರತಿ, ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಪ್ರೊ.ಕೃಷ್ಣೇ ಗೌಡ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

51 minutes ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

24 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

24 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

24 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago