Featured

ಮೋದಿಯವರ ನಾಯಕತ್ವದಲ್ಲಿ ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ : ಕುವೈತ್ ನಲ್ಲಿ ಅಣ್ಣಮಲೈ -Vishwanews24

ಕುವೈತ್: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ  ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ, ಜಾಗತಿಕ ಮಟ್ಟದಲ್ಲಿ ಭಾರತ ಗುರುತಿಸಿಕೊಳ್ಳುವಂತೆ ಆಗಿದೆ ಎಂದು ಕರ್ನಾಟಕದ ಸಿಂಘಂ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ಹೇಳಿದ್ದಾರೆ.

ಅವರು, ಕುವೈತ್ ನ, ಅಮೆರಿಕ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಭಾರತೀಯ ಪ್ರವಾಸಿ ಪರಿಷತ್ ಆಯೋಜಿಸಿದ್ದ ”ಕರುನಾಡ ಡಿಂಡಿಮಾ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಜಾಗತಿಕ ಮಟ್ಟದಲ್ಲಿ ವಿದೇಶಿ ರಾಷ್ಟ್ರಗಳ ಜೊತೆ ಉತ್ತಮ ಬಾಂಧವ್ಯ ಬೆಸೆಯುವ ಕಾರ್ಯ ಆಗುತ್ತಿದ್ದು ವಿಶ್ವದಾದ್ಯಂತ ಭಾರತವನ್ನು ಗುರುತಿಸಿಕೊಳ್ಳುವಂತೆ ಆಗಿದೆ. ಮೋದಿಯವರ ನೇತೃತ್ವದಲ್ಲಿ ಭಾರತದಲ್ಲಿ ಸುನಾಮಿ ಅಲೆಯೊಂದು ಸೃಷ್ಠಿಯಾಗಿದ್ದು, ಬದಲಾವಣೆಯ ಪರ್ವ ಆರಂಭವಾಗಿದೆ. ಹೀಗಾಗಿ ಈ ಒಂದು ರಾಷ್ಟ್ರಕ್ಕೆ ಈ ರೀತಿಯ ಆಡಳಿತ ಮುಖ್ಯ, ಈ ರೀತಿ ಬೆಳವಣಿಗೆ ನಡೆದಾಗ ಹಲವಾರು ಟೀಕೆ, ಅಡೆ ತಡೆಗಳು ಬರುತ್ತಿದ್ದು, ಅಂತಹ ಸಂಗತಿಗಳು ಅಶೋಕ, ಮೌರ್ಯ, ಬಾಬರ್ ಮತ್ತು ಅಕ್ಬರ್ ಭಾರತದಲ್ಲಿ ಆಳ್ವಿಕೆ ನಡೆಸಿದಾಗ ಗಮನಿಸಬಹುವುದು. ಮೊದಲು ಜನಸೇವಕರಾಗಿದ್ದ ಮೋದಿ ಇಂದು ದೇಶದ ಪ್ರಧಾನಿಯಾಗಿದ್ದು, ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ, ಈ ಮೂಲಕ ಸಕರಾತ್ಮಕ ಬದಲಾವಣೆಯತ್ತ ಭಾರತ ಸಾಗುತ್ತಿದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದಾರೆ.

ಕರ್ನಾಟಕದಲ್ಲಿ ಜನಿಸದಿದ್ದರೂ ಕನ್ನಡಿಗರು ನನಗೆ ನೀಡುವ ಪ್ರೀತಿ ಅಭಿಮಾನ ಗೌರವಕ್ಕೆ ನಾನು ಚಿರಋಣಿ. ಹಾಗಾಗಿ ಎಲ್ಲೇ ಇದ್ದರೂ ಕನ್ನಡಿಗರು ತಮ್ಮ ತಾಯ್ನಾಡಿನ ಬಗ್ಗೆ ಹೆಮ್ಮೆ ಪಡಬೇಕೆಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಮಲೈ ಕೇಂದ್ರಬಿಂದುವಾಗಿದ್ದು, ಅಲ್ಲಿನ ಜನ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ಅವರನ್ನು ಸನ್ಮಾನಿಸುವಾಗ ಎದ್ದು ನಿಂತು ಗೌರವಿಸಿದರು. ಕಾರ್ಯಕ್ರಮದಲ್ಲಿ ವಕೀಲ ಸುಮೋದ್, ಸತೀಶ್ಚಂದ್ರ ಶೆಟ್ಟಿ, ಫ್ರಾ.ಡೊಮಿನಿಕ್ ಸಿಕ್ವೆರಾ, ರಣವೀರ್ ಭಾರತಿ, ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಪ್ರೊ.ಕೃಷ್ಣೇ ಗೌಡ ಉಪಸ್ಥಿತರಿದ್ದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

10 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

10 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

10 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

11 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

11 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

13 hours ago